ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.
ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…