ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.
ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…