ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.
ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…