ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.
ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…