Advertisement
City mirror

ದ ಕ ಜಿಲ್ಲೆಯಲ್ಲಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದ ಜೀವವೈವಿಧ್ಯ ಮಂಡಳಿ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ ನದಿಗಳಲ್ಲಿ ಜೀವವೈವಿಧ್ಯ ಮಂಡಳಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದೆ. ಮೀನುಗಾರಿಕೆ ಇಲಾಖೆ ಸಹಕಾರದಲ್ಲಿ ಈ ಸ್ಥಳಗಳಲ್ಲಿ ಅಪರೂಪದ ಮೀನು ವೈವಿಧ್ಯ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ  ತಿಳಿಸಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಪ್ರವಾಸ ಕೈಗೊಂಡ ಬಳಿಕ ಈ ಮಾಹಿತಿ ನೀಡಿದ್ದಾರೆ. ದ ಕ ಜಿಲ್ಲೆಯಲ್ಲಿ  ಪ್ರವಾಸ ಮಾಡಿದ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ , 2 ಗಾಂಧೀ ಜಯಂತಿ ದಿನದಿಂದ 3 ದಿನ ಕಾಲ ಕುಮಾರಧಾರಾ ನದಿ ಸಂರಕ್ಷಣಾ ಅಭಿಯಾನದ  ನೇತೃತ್ವ ವಹಿಸಿದ್ದರು.ಕರ್ನಾಟಕ ಜೀವವೈವಿಧ್ಯ ಮಂಡಳಿ, ಪಂಚಾಯತ್ ಜೀವವೈವಿಧ್ಯ ಸಮಿತಿಗಳು, ಅರಣ್ಯ ಇಲಾಖೆ ಇವುಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆದಿತ್ತು.

 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನದೀಮಾಲಿನ್ಯ ಸಮಸ್ಯೆ ನಿವಾರಣೆ ಬಗ್ಗೆ ನಾಗರೀಕರು, ಪಂಚಾಯತ್, ದೇವಾಲಯ ಆಡಳಿತದ ಜೊತೆ ಸಮಾಲೋಚನಾ ಸಭೆ ನಡೆಸುವುದರೊಂದಿಗೆ ನದಿ ತೀರಕ್ಕೆ ಹಾಗೂ ಭೇಟಿ, ವೃಕ್ಷಾರೋಪಣಾ ಕಾರ್ಯಕ್ರಮಗಳು ನಡೆದವು. ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಮುಂದಾಗಿ ಮಾಲಿನ್ಯ ತಡೆ ಕ್ರಮ ತ್ವರಿತವಾಗಿ ಜಾರಿ ಮಾಡಲು ಸೂಚಿಸಿದರು. ಹೋಟೆಲ್ ಅಡಿಗೆ ತ್ಯಾಜ್ಯಾದಿಂದ ಬಯೋಗ್ಯಾಸ್ ತಯಾರಿಸಿ, ತ್ಯಾಜ್ಯಾ ಸಮಸ್ಯೆ ನಿವಾರಿಸಿ ಎಂದು ಸುಬ್ರಹ್ಮಣ್ಯದ ಹೋಟೆಲ್ ಉದ್ಯಮಿಗಳಿಗೆ ಹೇಳಿದರು.

ಕುಮಾರಧಾರ ನದಿ ತೀರ ಉರುಂಬಿಯಲ್ಲಿ ರೈತರು ಹಾಗೂ ಪರಿಸರ ಕಾರ್ಯಕರ್ತರ ಜೊತೆ ನದಿ ಪೂಜೆ ಮಾಡಿ ನದಿಗೆ ಬಾಗಿನ ಅರ್ಪಿಸಿದರು. ಉರುಂಬಿ ನದಿ ಪ್ರದೇಶವನ್ನು ಸೂಕ್ಷ್ಮ ಜೀವ ಸಂಕುಲ ತಾಣ ಎಂದು ಕಡಬ ತಾಲೂಕು ಪಂಚಾಯತ್ ಸಮಿತಿ ಸಭೆಯಲ್ಲಿ ಗುರುತಿಸಲಾಯಿತು. ಸುಳ್ಯ ತಾಲ್ಲೂಕು ಮಡಪ್ಪಾಡಿ ಗ್ರಾಮ ಪಂಚಾಯತ್ ಸಮಿತಿ ಸಭೆಯಲ್ಲಿ ತಜ್ಞರ ತಂಡ ಮಾಯಿಲ ಕೋಟೆ ಗುಡ್ಡ ಪ್ರದೇಶಕ್ಕೆ ಸಂರಕ್ಷಣಾ ಕವಚ ತೊಡಿಸಲು ನಿರ್ಧರಿಸಿತು.

ಸುಳ್ಯ ತಾಲೂಕು ಪಂಚಾಯತ್ ಸಮಿತಿ ಸಭೆಯಲ್ಲಿ ನದಿ ಕಣಿವೆಗಳಲ್ಲಿರುವ ಮಿರಿಸ್ವಿಕಾ ಸ್ವಾಂಪ್ಸ್‍ಗಳನ್ನು ಗುರುತಿಸಿ ಸಂರಕ್ಷಣೆ ಮಾಡಲು ನಿರ್ಧರಿಸಲಾಯಿತು. ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರಿ, ಜಿಲ್ಲಾ ಅರಣ್ಯಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಕುಮಾರಧಾರಾ ನೇತ್ರಾವತಿ ನದೀ ಕಣಿವೆಗಳಲ್ಲಿ ಇರುವ ಡೀಮ್ಡ್ ಅರಣ್ಯಗಳ ಸಂರಕ್ಷಣಾ ಯೋಜನೆಯನ್ನು ರೂಪಿಸಿ ಜಾರಿ ಮಾಡಬೇಕು ಎಂದು ಜೀವವೈವಿಧ್ಯ ಮಂಡಳಿ ಅಧ್ಯಕ್ಷರು ಸೂಚನೆ ನೀಡಿದರು.

ನದೀ ಸಂರಕ್ಷಣಾ ಅಭಿಯಾನದಲ್ಲಿ ತಜ್ಞರಾದ  ಪ್ರಸನ್ನ, ಕಾರ್ತಿಕ್, ಡಾ.ದೇವಿ ಪ್ರಸಾದ್, ಡಾ. ಶೆಣೈ, ಪ್ರೊ|| ಸ್ಮಿತಾ, ಡಾ.ರೇವತಿ ಉಪಸ್ಥಿತದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

5 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

5 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

20 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago