Advertisement
City mirror

ದ ಕ ಜಿಲ್ಲೆಯಲ್ಲಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದ ಜೀವವೈವಿಧ್ಯ ಮಂಡಳಿ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ ನದಿಗಳಲ್ಲಿ ಜೀವವೈವಿಧ್ಯ ಮಂಡಳಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದೆ. ಮೀನುಗಾರಿಕೆ ಇಲಾಖೆ ಸಹಕಾರದಲ್ಲಿ ಈ ಸ್ಥಳಗಳಲ್ಲಿ ಅಪರೂಪದ ಮೀನು ವೈವಿಧ್ಯ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ  ತಿಳಿಸಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಪ್ರವಾಸ ಕೈಗೊಂಡ ಬಳಿಕ ಈ ಮಾಹಿತಿ ನೀಡಿದ್ದಾರೆ. ದ ಕ ಜಿಲ್ಲೆಯಲ್ಲಿ  ಪ್ರವಾಸ ಮಾಡಿದ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ , 2 ಗಾಂಧೀ ಜಯಂತಿ ದಿನದಿಂದ 3 ದಿನ ಕಾಲ ಕುಮಾರಧಾರಾ ನದಿ ಸಂರಕ್ಷಣಾ ಅಭಿಯಾನದ  ನೇತೃತ್ವ ವಹಿಸಿದ್ದರು.ಕರ್ನಾಟಕ ಜೀವವೈವಿಧ್ಯ ಮಂಡಳಿ, ಪಂಚಾಯತ್ ಜೀವವೈವಿಧ್ಯ ಸಮಿತಿಗಳು, ಅರಣ್ಯ ಇಲಾಖೆ ಇವುಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆದಿತ್ತು.

Advertisement

 

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನದೀಮಾಲಿನ್ಯ ಸಮಸ್ಯೆ ನಿವಾರಣೆ ಬಗ್ಗೆ ನಾಗರೀಕರು, ಪಂಚಾಯತ್, ದೇವಾಲಯ ಆಡಳಿತದ ಜೊತೆ ಸಮಾಲೋಚನಾ ಸಭೆ ನಡೆಸುವುದರೊಂದಿಗೆ ನದಿ ತೀರಕ್ಕೆ ಹಾಗೂ ಭೇಟಿ, ವೃಕ್ಷಾರೋಪಣಾ ಕಾರ್ಯಕ್ರಮಗಳು ನಡೆದವು. ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಮುಂದಾಗಿ ಮಾಲಿನ್ಯ ತಡೆ ಕ್ರಮ ತ್ವರಿತವಾಗಿ ಜಾರಿ ಮಾಡಲು ಸೂಚಿಸಿದರು. ಹೋಟೆಲ್ ಅಡಿಗೆ ತ್ಯಾಜ್ಯಾದಿಂದ ಬಯೋಗ್ಯಾಸ್ ತಯಾರಿಸಿ, ತ್ಯಾಜ್ಯಾ ಸಮಸ್ಯೆ ನಿವಾರಿಸಿ ಎಂದು ಸುಬ್ರಹ್ಮಣ್ಯದ ಹೋಟೆಲ್ ಉದ್ಯಮಿಗಳಿಗೆ ಹೇಳಿದರು.

ಕುಮಾರಧಾರ ನದಿ ತೀರ ಉರುಂಬಿಯಲ್ಲಿ ರೈತರು ಹಾಗೂ ಪರಿಸರ ಕಾರ್ಯಕರ್ತರ ಜೊತೆ ನದಿ ಪೂಜೆ ಮಾಡಿ ನದಿಗೆ ಬಾಗಿನ ಅರ್ಪಿಸಿದರು. ಉರುಂಬಿ ನದಿ ಪ್ರದೇಶವನ್ನು ಸೂಕ್ಷ್ಮ ಜೀವ ಸಂಕುಲ ತಾಣ ಎಂದು ಕಡಬ ತಾಲೂಕು ಪಂಚಾಯತ್ ಸಮಿತಿ ಸಭೆಯಲ್ಲಿ ಗುರುತಿಸಲಾಯಿತು. ಸುಳ್ಯ ತಾಲ್ಲೂಕು ಮಡಪ್ಪಾಡಿ ಗ್ರಾಮ ಪಂಚಾಯತ್ ಸಮಿತಿ ಸಭೆಯಲ್ಲಿ ತಜ್ಞರ ತಂಡ ಮಾಯಿಲ ಕೋಟೆ ಗುಡ್ಡ ಪ್ರದೇಶಕ್ಕೆ ಸಂರಕ್ಷಣಾ ಕವಚ ತೊಡಿಸಲು ನಿರ್ಧರಿಸಿತು.

Advertisement

ಸುಳ್ಯ ತಾಲೂಕು ಪಂಚಾಯತ್ ಸಮಿತಿ ಸಭೆಯಲ್ಲಿ ನದಿ ಕಣಿವೆಗಳಲ್ಲಿರುವ ಮಿರಿಸ್ವಿಕಾ ಸ್ವಾಂಪ್ಸ್‍ಗಳನ್ನು ಗುರುತಿಸಿ ಸಂರಕ್ಷಣೆ ಮಾಡಲು ನಿರ್ಧರಿಸಲಾಯಿತು. ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರಿ, ಜಿಲ್ಲಾ ಅರಣ್ಯಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಕುಮಾರಧಾರಾ ನೇತ್ರಾವತಿ ನದೀ ಕಣಿವೆಗಳಲ್ಲಿ ಇರುವ ಡೀಮ್ಡ್ ಅರಣ್ಯಗಳ ಸಂರಕ್ಷಣಾ ಯೋಜನೆಯನ್ನು ರೂಪಿಸಿ ಜಾರಿ ಮಾಡಬೇಕು ಎಂದು ಜೀವವೈವಿಧ್ಯ ಮಂಡಳಿ ಅಧ್ಯಕ್ಷರು ಸೂಚನೆ ನೀಡಿದರು.

ನದೀ ಸಂರಕ್ಷಣಾ ಅಭಿಯಾನದಲ್ಲಿ ತಜ್ಞರಾದ  ಪ್ರಸನ್ನ, ಕಾರ್ತಿಕ್, ಡಾ.ದೇವಿ ಪ್ರಸಾದ್, ಡಾ. ಶೆಣೈ, ಪ್ರೊ|| ಸ್ಮಿತಾ, ಡಾ.ರೇವತಿ ಉಪಸ್ಥಿತದ್ದರು.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

2 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

3 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

11 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

12 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

13 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

14 hours ago