ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

February 12, 2026
7:04 AM
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕುಮಾರಸ್ವಾಮಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಮೇಲೆ ವನ್ಯಜೀವಿಗಳಿಂದಾಗುತ್ತಿರುವ ಹಾನಿ, ಪ್ರಾಣಾಪಾಯ ಮತ್ತು ಆರ್ಥಿಕ ನಷ್ಟದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.

Advertisement

ರಾಜ್ಯದ ಅರಣ್ಯ ಅಂಚಿನ ಜಿಲ್ಲೆಗಳಲ್ಲಿ ಆನೆಗಳ ದಾಳಿ ಹೆಚ್ಚುತ್ತಿದ್ದು, ರೈತರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗುತ್ತಿದೆ. ಬೆಳೆ ಹಾನಿ, ಮನೆಗಳ ನಾಶ ಮತ್ತು ಕೆಲವೆಡೆ ಪ್ರಾಣಹಾನಿಯೂ ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಹೀಗಾಗಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಾರ್ಯಯೋಜನೆ ರೂಪಿಸಬೇಕು, ಆನೆ ಕಾರಿಡಾರ್‌ ಸಮಗ್ರ ನಿರ್ವಹಣೆ ಅಗತ್ಯ, ರೈತರಿಗೆ ತ್ವರಿತ ಪರಿಹಾರ ಹಾಗೂ ರಕ್ಷಣಾ ವ್ಯವಸ್ಥೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿ, ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಶಾಶ್ವತ ಪರಿಹಾರ ಅಗತ್ಯ :  ಮಾನವ–ವನ್ಯಜೀವಿ ಸಂಘರ್ಷವು ಕೇವಲ ಅರಣ್ಯ ಇಲಾಖೆಯ ವಿಷಯವಲ್ಲ. ಇದು ರೈತರ ಜೀವನೋಪಾಯ, ಗ್ರಾಮೀಣ ಸುರಕ್ಷತೆ ಮತ್ತು ಸಾಮಾಜಿಕ ಸ್ಥಿರತೆಗೆ ಸಂಬಂಧಿಸಿದ ದೊಡ್ಡ ಸಮಸ್ಯೆ. ತಜ್ಞರ ಪ್ರಕಾರ, ಅರಣ್ಯ ಪುನರುಜ್ಜೀವನ, ಆನೆ ಕಾರಿಡಾರ್‌ಗಳ ರಕ್ಷಣೆ, ತಂತ್ರಜ್ಞಾನ ಆಧಾರಿತ ಮುನ್ನೆಚ್ಚರಿಕೆ ವ್ಯವಸ್ಥೆ, ರೈತರಿಗೆ ಸಮರ್ಪಕ ಪರಿಹಾರ ಇವು ಸಮಗ್ರವಾಗಿ ಜಾರಿಯಾಗಬೇಕು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror