ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಮೇಲೆ ವನ್ಯಜೀವಿಗಳಿಂದಾಗುತ್ತಿರುವ ಹಾನಿ, ಪ್ರಾಣಾಪಾಯ ಮತ್ತು ಆರ್ಥಿಕ ನಷ್ಟದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.
ರಾಜ್ಯದ ಅರಣ್ಯ ಅಂಚಿನ ಜಿಲ್ಲೆಗಳಲ್ಲಿ ಆನೆಗಳ ದಾಳಿ ಹೆಚ್ಚುತ್ತಿದ್ದು, ರೈತರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗುತ್ತಿದೆ. ಬೆಳೆ ಹಾನಿ, ಮನೆಗಳ ನಾಶ ಮತ್ತು ಕೆಲವೆಡೆ ಪ್ರಾಣಹಾನಿಯೂ ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಹೀಗಾಗಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಾರ್ಯಯೋಜನೆ ರೂಪಿಸಬೇಕು, ಆನೆ ಕಾರಿಡಾರ್ ಸಮಗ್ರ ನಿರ್ವಹಣೆ ಅಗತ್ಯ, ರೈತರಿಗೆ ತ್ವರಿತ ಪರಿಹಾರ ಹಾಗೂ ರಕ್ಷಣಾ ವ್ಯವಸ್ಥೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿ, ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಶಾಶ್ವತ ಪರಿಹಾರ ಅಗತ್ಯ : ಮಾನವ–ವನ್ಯಜೀವಿ ಸಂಘರ್ಷವು ಕೇವಲ ಅರಣ್ಯ ಇಲಾಖೆಯ ವಿಷಯವಲ್ಲ. ಇದು ರೈತರ ಜೀವನೋಪಾಯ, ಗ್ರಾಮೀಣ ಸುರಕ್ಷತೆ ಮತ್ತು ಸಾಮಾಜಿಕ ಸ್ಥಿರತೆಗೆ ಸಂಬಂಧಿಸಿದ ದೊಡ್ಡ ಸಮಸ್ಯೆ. ತಜ್ಞರ ಪ್ರಕಾರ, ಅರಣ್ಯ ಪುನರುಜ್ಜೀವನ, ಆನೆ ಕಾರಿಡಾರ್ಗಳ ರಕ್ಷಣೆ, ತಂತ್ರಜ್ಞಾನ ಆಧಾರಿತ ಮುನ್ನೆಚ್ಚರಿಕೆ ವ್ಯವಸ್ಥೆ, ರೈತರಿಗೆ ಸಮರ್ಪಕ ಪರಿಹಾರ ಇವು ಸಮಗ್ರವಾಗಿ ಜಾರಿಯಾಗಬೇಕು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…