ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಮೇಲೆ ವನ್ಯಜೀವಿಗಳಿಂದಾಗುತ್ತಿರುವ ಹಾನಿ, ಪ್ರಾಣಾಪಾಯ ಮತ್ತು ಆರ್ಥಿಕ ನಷ್ಟದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.
ರಾಜ್ಯದ ಅರಣ್ಯ ಅಂಚಿನ ಜಿಲ್ಲೆಗಳಲ್ಲಿ ಆನೆಗಳ ದಾಳಿ ಹೆಚ್ಚುತ್ತಿದ್ದು, ರೈತರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗುತ್ತಿದೆ. ಬೆಳೆ ಹಾನಿ, ಮನೆಗಳ ನಾಶ ಮತ್ತು ಕೆಲವೆಡೆ ಪ್ರಾಣಹಾನಿಯೂ ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಹೀಗಾಗಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಾರ್ಯಯೋಜನೆ ರೂಪಿಸಬೇಕು, ಆನೆ ಕಾರಿಡಾರ್ ಸಮಗ್ರ ನಿರ್ವಹಣೆ ಅಗತ್ಯ, ರೈತರಿಗೆ ತ್ವರಿತ ಪರಿಹಾರ ಹಾಗೂ ರಕ್ಷಣಾ ವ್ಯವಸ್ಥೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿ, ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಶಾಶ್ವತ ಪರಿಹಾರ ಅಗತ್ಯ : ಮಾನವ–ವನ್ಯಜೀವಿ ಸಂಘರ್ಷವು ಕೇವಲ ಅರಣ್ಯ ಇಲಾಖೆಯ ವಿಷಯವಲ್ಲ. ಇದು ರೈತರ ಜೀವನೋಪಾಯ, ಗ್ರಾಮೀಣ ಸುರಕ್ಷತೆ ಮತ್ತು ಸಾಮಾಜಿಕ ಸ್ಥಿರತೆಗೆ ಸಂಬಂಧಿಸಿದ ದೊಡ್ಡ ಸಮಸ್ಯೆ. ತಜ್ಞರ ಪ್ರಕಾರ, ಅರಣ್ಯ ಪುನರುಜ್ಜೀವನ, ಆನೆ ಕಾರಿಡಾರ್ಗಳ ರಕ್ಷಣೆ, ತಂತ್ರಜ್ಞಾನ ಆಧಾರಿತ ಮುನ್ನೆಚ್ಚರಿಕೆ ವ್ಯವಸ್ಥೆ, ರೈತರಿಗೆ ಸಮರ್ಪಕ ಪರಿಹಾರ ಇವು ಸಮಗ್ರವಾಗಿ ಜಾರಿಯಾಗಬೇಕು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…