ಪರಿಸರ ಸಂರಕ್ಷಣೆ ಮಾಡುತ್ತಿರುವ ನಿವೃತ್ತ ಅರಣ್ಯಾಧಿಕಾರಿ | ಬೋನ್ಸಾಯ್ ಪದ್ಧತಿಯಲ್ಲಿ ಗಿಡ ಬೆಳೆಸುವ ಪರಿಸರ ಪ್ರೇಮಿ |

March 7, 2022
10:41 AM

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ಗ್ರಾಮದ ನಿವಾಸಿಯಾದ ಪರಿಸರ ಪ್ರೇಮಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ಅವರು ನಿವೃತ್ತ ಜೀವನದಲ್ಲಿ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Advertisement
Advertisement

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಹೊಸ ಶೈಲಿಯಲ್ಲಿ ಔಷಧೀಯ ಗುಣವುಳ್ಳ ಗಿಡಗಳು, ನೂರಾರು ವರ್ಷ ಬಾಳುವ ಮರಗಳನ್ನು ಬೆಳೆಸಲು ಮುಂದಾಗಿದ್ದಾರೆ.  ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲಿ ಕಲಾನಿಕೇತನ ಅರಣ್ಯ ನಿರ್ಮಾಣ ಮಾಡಿದ್ದಾರೆ. ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ.

ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ.

ನಿವೃತ್ತ ಅರಣ್ಯಾಧಿಕಾರಿಯಾಗಿ ಪರಿಸರ ಪ್ರೇಮ ಬೆಳೆಸಿರುವ ಅವರ ನಡೆಯುವ ಇತರರಿಗೂ ಮಾದರಿಯಾಗಿದ್ದು, ಪರಿಸರ ಉಳಿಸಲು ಮಹತ್ವದ ಮಾದರಿಯನ್ನು ತೋರಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror