Advertisement
ವಿಶೇಷ ವರದಿಗಳು

ಪರಿಸರ ಸಂರಕ್ಷಣೆ ಮಾಡುತ್ತಿರುವ ನಿವೃತ್ತ ಅರಣ್ಯಾಧಿಕಾರಿ | ಬೋನ್ಸಾಯ್ ಪದ್ಧತಿಯಲ್ಲಿ ಗಿಡ ಬೆಳೆಸುವ ಪರಿಸರ ಪ್ರೇಮಿ |

Share

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ಗ್ರಾಮದ ನಿವಾಸಿಯಾದ ಪರಿಸರ ಪ್ರೇಮಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ಅವರು ನಿವೃತ್ತ ಜೀವನದಲ್ಲಿ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಹೊಸ ಶೈಲಿಯಲ್ಲಿ ಔಷಧೀಯ ಗುಣವುಳ್ಳ ಗಿಡಗಳು, ನೂರಾರು ವರ್ಷ ಬಾಳುವ ಮರಗಳನ್ನು ಬೆಳೆಸಲು ಮುಂದಾಗಿದ್ದಾರೆ.  ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲಿ ಕಲಾನಿಕೇತನ ಅರಣ್ಯ ನಿರ್ಮಾಣ ಮಾಡಿದ್ದಾರೆ. ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ.

ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ.

ನಿವೃತ್ತ ಅರಣ್ಯಾಧಿಕಾರಿಯಾಗಿ ಪರಿಸರ ಪ್ರೇಮ ಬೆಳೆಸಿರುವ ಅವರ ನಡೆಯುವ ಇತರರಿಗೂ ಮಾದರಿಯಾಗಿದ್ದು, ಪರಿಸರ ಉಳಿಸಲು ಮಹತ್ವದ ಮಾದರಿಯನ್ನು ತೋರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

20 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

21 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

22 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

23 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago