Advertisement
ವಿಶೇಷ ವರದಿಗಳು

ಪರಿಸರ ಸಂರಕ್ಷಣೆ ಮಾಡುತ್ತಿರುವ ನಿವೃತ್ತ ಅರಣ್ಯಾಧಿಕಾರಿ | ಬೋನ್ಸಾಯ್ ಪದ್ಧತಿಯಲ್ಲಿ ಗಿಡ ಬೆಳೆಸುವ ಪರಿಸರ ಪ್ರೇಮಿ |

Share

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ಗ್ರಾಮದ ನಿವಾಸಿಯಾದ ಪರಿಸರ ಪ್ರೇಮಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ಅವರು ನಿವೃತ್ತ ಜೀವನದಲ್ಲಿ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಹೊಸ ಶೈಲಿಯಲ್ಲಿ ಔಷಧೀಯ ಗುಣವುಳ್ಳ ಗಿಡಗಳು, ನೂರಾರು ವರ್ಷ ಬಾಳುವ ಮರಗಳನ್ನು ಬೆಳೆಸಲು ಮುಂದಾಗಿದ್ದಾರೆ.  ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲಿ ಕಲಾನಿಕೇತನ ಅರಣ್ಯ ನಿರ್ಮಾಣ ಮಾಡಿದ್ದಾರೆ. ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ.

ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ.

ನಿವೃತ್ತ ಅರಣ್ಯಾಧಿಕಾರಿಯಾಗಿ ಪರಿಸರ ಪ್ರೇಮ ಬೆಳೆಸಿರುವ ಅವರ ನಡೆಯುವ ಇತರರಿಗೂ ಮಾದರಿಯಾಗಿದ್ದು, ಪರಿಸರ ಉಳಿಸಲು ಮಹತ್ವದ ಮಾದರಿಯನ್ನು ತೋರಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

9 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

13 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

22 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

22 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

23 hours ago