Advertisement
ವಿಶೇಷ ವರದಿಗಳು

ಪರಿಸರ ಸಂರಕ್ಷಣೆ ಮಾಡುತ್ತಿರುವ ನಿವೃತ್ತ ಅರಣ್ಯಾಧಿಕಾರಿ | ಬೋನ್ಸಾಯ್ ಪದ್ಧತಿಯಲ್ಲಿ ಗಿಡ ಬೆಳೆಸುವ ಪರಿಸರ ಪ್ರೇಮಿ |

Share

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ಗ್ರಾಮದ ನಿವಾಸಿಯಾದ ಪರಿಸರ ಪ್ರೇಮಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ಅವರು ನಿವೃತ್ತ ಜೀವನದಲ್ಲಿ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಹೊಸ ಶೈಲಿಯಲ್ಲಿ ಔಷಧೀಯ ಗುಣವುಳ್ಳ ಗಿಡಗಳು, ನೂರಾರು ವರ್ಷ ಬಾಳುವ ಮರಗಳನ್ನು ಬೆಳೆಸಲು ಮುಂದಾಗಿದ್ದಾರೆ.  ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲಿ ಕಲಾನಿಕೇತನ ಅರಣ್ಯ ನಿರ್ಮಾಣ ಮಾಡಿದ್ದಾರೆ. ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ.

ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ.

ನಿವೃತ್ತ ಅರಣ್ಯಾಧಿಕಾರಿಯಾಗಿ ಪರಿಸರ ಪ್ರೇಮ ಬೆಳೆಸಿರುವ ಅವರ ನಡೆಯುವ ಇತರರಿಗೂ ಮಾದರಿಯಾಗಿದ್ದು, ಪರಿಸರ ಉಳಿಸಲು ಮಹತ್ವದ ಮಾದರಿಯನ್ನು ತೋರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago