Advertisement
MIRROR FOCUS

‘ಬಾರಿಸು ಕನ್ನಡ ಡಿಂಡಿಮ’ ಕವಿಯ ಹುಟ್ಟು ಹಬ್ಬದ ಸಂಭ್ರಮ

Share
ಸೂರ್ಯಾಸ್ತ, ಸೂರ್ಯೋದಯದ ನಿತ್ಯ ಬೆಡಗು, ಹಕ್ಕಿಗಳ ಇಂಚರ , ಮರದೆಲೆಯ ಮೇಲೆ ನಿಂತಿರುವ ನೀರ ಹನಿ, ಅದರಲ್ಲಿ ಪ್ರತಿಫಲಿಸುವ ಸೂರ್ಯಕಿರಣ, ಕುಣಿಯುವ ನವಿಲು , ಮರದಿಂದ ಮರಕೆ ಹೋಗುವ ಅಳಿಲು ಕೆಲವರ ಮೇಲೆ ಪ್ರಭಾವ ಬೀರುತ್ತವೆ. ಪ್ರಕೃತಿಯ ದೃಶ್ಯಗಳಿಂದ ಪ್ರೇರೇಪಿತವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡ ಜನಮುಖಿ ಕವಿಗಳಲ್ಲಿ ಪ್ರಮುಖರಾದವರು ಕುವೆಂಪುರವರು. ಕುಪ್ಪಳ್ಳಿ , ಕವಿಶೈಲ ಪರಿಸರದ ಅಪಾರ ಪ್ರಭಾವವನ್ನು ಕವಿಯ ಪ್ರತಿಯೊಂದು ರಚನೆಯಲ್ಲೂ ಪ್ರತಿಫಲಿಸುತ್ತದೆ.

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಹೆಸರಿನಿಂದ ಪ್ರಥಮ ಅಕ್ಷರಗಳನ್ನು ಆರಿಸಿಕೊಂಡು ಕುವೆಂಪು ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿ ಯುಗದ ಕವಿ ಜಗದ ಕವಿಯೆಂದು ಬೇಂದ್ರೆಯವರಿಂದಲೇ ಬಿರುದಾಂಕಿತರಾದವರು. ತಮ್ಮ ಬಾಲ್ಯವನ್ನು ಕುಪ್ಪಳ್ಳಿಯಲ್ಲಿ ಹಾಗೂ ಮುಂದಿನ ದಿನಗಳನ್ನು ಮೈಸೂರಿನ ಉದಯರವಿಯಲ್ಲೇ ಕಳೆದರು. ಅವರು 29 ಡಿಸೆಂಬರ್ 1904 ರಲ್ಲಿ ಜನಿಸಿದರು. ಇಂದು ಕವಿಯ 116 ನೇ ಹುಟ್ಟು ಹಬ್ಬ.

ಕುವೆಂಪು ಎಂಬ ಹೆಸರಿನೊಂದಿಗೆ ತಟ್ಟನೆ ನೆನಪಾಗುವುದು’ ಓ ನನ್ನ ಚೇತನ ‘ಎಂಬ ವಿಶ್ವ ಮಾನವ ಸಂದೇಶ ಸಾರುವ ಗೀತೆ. ಪ್ರೌಢಶಾಲಾ ವಿದ್ಯಾಭ್ಯಸದ ಆರಂಭದ ದಿನಗಳಲ್ಲಿ ನಮ್ಮ ಕನ್ನಡ ಟೀಚರ್ ಬಿ .ಎನ್. ಕಲಾವತಿಯವರು ಸೂಕ್ತ ರಾಗ ಅಳವಡಿಸಿ ಹಾಡುತ್ತಿದ್ದುದು ಇನ್ನೂ ಕಿವಿಯಲ್ಲಿ ರಿಂಗಿಣಿಸುತ್ತಿದೆ. ಕಣ್ಣು ಮುಚ್ಚಿ ಓ ನನ್ನ ಚೇತನ ಗೀತೆಯನ್ನು ಅವರು ಹಾಡುತ್ತಿದ್ದರೆ ಒಂದರೆಗಳಿಗೆ ಅಕ್ಕಪಕ್ಕದ ತರಗತಿಗಳು ಸ್ಥಬ್ದವಾಗುತ್ತಿತ್ತು.

ಭಾವಗೀತೆಗಳೇ ಆಗಿರಲಿ, ದೇಶಭಕ್ತಿ ಗೀತೆಗಳೇ ಆಗಿರಲಿ ಮನಸಿಗೆ ಮುಟ್ಟುವಂತೆ ಬರೆಯುತ್ತಿದ್ದವರು ಕುವೆಂಪು ಅವರು. ನಮ್ಮ ನೆಚ್ಚಿನ ಕವಿ ‘ರಾಷ್ಟ್ರ ಕವಿ’ಯೆಂಬ ಹೆಮ್ಮೆ. ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಕೃಷಿಗೈದವರು ಕುವೆಂಪುರವರು. ಅವರ ಕವಿತೆಗಳು, ನಾಟಕಗಳು , ಕಾದಂಬರಿಗಳು ಮುಖ್ಯವಾಗಿ ಪ್ರಕೃತಿ, ದೇಶಪ್ರೇಮ, ಪ್ರೀತಿ ಆಧ್ಯಾತ್ಮ, ವೈಚಾರಿಕತೆಯ ವಿಷಯಗಳ ಆಧಾರಿತವಾಗಿರುತ್ತಿದ್ದುವು. ಕೆಲವೊಂದು ಕವಿತೆಗಳಂತು ಮನಸಿನಲ್ಲಿ ಕ್ರಾಂತಿಯ ಕಿಚ್ಚು ಹಚ್ಚುವಂತಿವೆ. ಕನ್ನಡ ನಾಡು ನುಡಿಯ ಒಳಿತಿಗಾಗಿ ಬರೆದ ಹಾಡುಗಳು ಕ್ರಾಂತಿಕಾರಿ ಯಾಗಿರುತ್ತಿತ್ತು. ಜನರ ಭಾವನೆಗಳನ್ನು ಬಡಿದೆಬ್ಬಿಸುವಂತಿರುತ್ತವೆ.
ಅವು ಅಂದಿಗೂ ಇಂದಿಗೂ ಎಂದಿಗೂ ಪ್ರಸ್ತುತ.

“ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ ||
ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗಿ
ಭವಭವದಿ ಭವಿಸಿ ಹೇ! ಭವವಿದೂರ……………
ಎಂದು ಗಾಯಕ ಸಿ ಅಶ್ವಥ್ ಹಾಡುತ್ತಿದ್ದರೆ ಮೈ ರೋಮಾಂಚನವಾಗದಿರದು.

ಅವರೊಬ್ಬ ಕವಿ, ಕಾದಂಬರಿಗಾರ, ಚಿಂತಕ, ಪ್ರಾಧ್ಯಾಪಕ, ಪ್ರಾಂಶುಪಾಲ, ಕುಲಪತಿ, ವಿಮರ್ಶಕ , ಹೋರಾಟಗಾರ ಎಲ್ಲವೂ.
ಸ್ವಾವಲಂಬನೆ , ಸ್ವಾತಂತ್ರ್ಯ , ಇಚ್ಛಾಶಕ್ತಿ ಸಾಧಿಸದ ಹೊರತು ಅಭಿವೃದ್ಧಿ ಅಸಾಧ್ಯವೆಂಬುದನ್ನು ಬಲವಾಗಿ ಪ್ರತಿಪಾದಿಸಿದರು ಕುವೆಂಪುರವರು.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

36 minutes ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

16 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

22 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago