ಮಂಗನ ಕಾಯಿಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ

October 16, 2024
7:46 PM

ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.

Advertisement

ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಕೋ ಕಹಿ | ಬೇಡಿಕೆ ಇದ್ದರೂ ಬೆಲೆ ಇಳಿಕೆ.. ರೈತರು ಸಂಕಷ್ಟದಲ್ಲಿ
January 22, 2026
7:33 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯ ಗುಟ್ಟು : ಏನಿದು Push & Pull ತಂತ್ರ
January 22, 2026
7:05 AM
by: ಅರುಣ್‌ ಕುಮಾರ್ ಕಾಂಚೋಡು
ಮಹಿಳಾ ರೈತರ ಸಬಲೀಕರಣಕ್ಕೆ ಗೋದ್ರೆಜ್–ಮಹಾರಾಷ್ಟ್ರ ಸರ್ಕಾರದ ಮಹತ್ವದ ಒಪ್ಪಂದ
January 22, 2026
6:55 AM
by: ಮಿರರ್‌ ಡೆಸ್ಕ್
ಬೆಳೆ ಸಂರಕ್ಷಣೆಯಲ್ಲಿ ಹೊಸ ತಂತ್ರಜ್ಞಾನ | ಕೃಷಿಯಲ್ಲಿ ಯಾಕೆ ಹೊಸ ಔಷಧಿಗಳು ಬರುತ್ತಿಲ್ಲ…?
January 22, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror