ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.
ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…