ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.
ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…