Advertisement
MIRROR FOCUS

ಬೆಂಗಳೂರಿಗೆ ನೀರಿನ ಕೊರತೆ | ಆದರೂ ನೀರಿನ ನಿರ್ವಹಣೆಯಲ್ಲಿ ಬೆಂಗಳೂರು ದೇಶದಲ್ಲೇ ನಂ.2

Share

ನೀರಿಲ್ಲ, ನೀರಿಲ್ಲ.. ಬೆಂಗಳೂರಿನಲ್ಲಿ(Bengaluru) ನೀರಿಲ್ಲ(No water) ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮಳೆ ಬರಲು ಇನ್ನು 2-3 ತಿಂಗಳು ಬಾಕಿ ಇದೆ. ಅಲ್ಲಿ ತನಕ ಬೆಂಗಳೂರಿಗೆ ನೀರಿನ ಕೊರತೆ ತೀವ್ರವಾಗಿ(Water crisis) ಕಾಡಲಿದೆ ಎಂದು ಭಾವಿಸಲಾಗಿದೆ. ಈ ಮಧ್ಯೆಯೂ ನೀರಿನ ನಿರ್ವಹಣೆಯಲ್ಲಿ(Water management) ಬೆಂಗಳೂರು ಟಾಪ್‌ 5 ರಲ್ಲಿ ಸ್ಥಾನ ಪಡೆದಿದೆ. ಬಳಸಿದ ನೀರು ನಿರ್ವಹಣೆಯಲ್ಲಿ ಸೂರತ್‌ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು (Bengaluru Water Crisis) 2ನೇ ಸ್ಥಾನದಲ್ಲಿದೆ. ಥಿಂಕ್ ಟ್ಯಾಂಕ್ ಕೌನ್ಸಿಲ್ ಆನ್ ಎನರ್ಜಿ, ವಾಟರ್ ಆ್ಯಂಡ್ ಎನ್ವಿರಾನ್‌ಮೆಂಟ್‌ ನಡೆಸಿದ ಸರ್ವೇ(Survey) ಈ ಅಂಶ ಬೆಳಕಿಗೆ ಬಂದಿದೆ. ದೇಶದ 10 ರಾಜ್ಯಗಳ ಪೈಕಿ 500 ನಗರಗಳನ್ನು ಸರ್ವೇಗೆ ಒಳಪಡಿಸಲಾಗಿತ್ತು.

ಬಳಸಿದ ನೀರು ನಿರ್ವಹಣೆಯಲ್ಲಿ ಸೂರತ್‌ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಸಂಶೋಧನೆಗಳ ಆಧಾರದಲ್ಲಿ ಸೂರತ್‌ಗೆ 3.32 ಅಂಕಗಳ ಮೂಲಕ ಮೊದಲ ಸ್ಥಾನ ಇದೆ. ಬೆಂಗಳೂರು 5 ಅಂಕಗಳಿಗೆ 3.23 ಅಂಕ ಪಡೆದು 2ನೇ ಸ್ಥಾನದಲ್ಲಿದೆ. ಬಳಸಿದ ನೀರು ಮರುಬಳಕೆ ವಿಚಾರದಲ್ಲಿ ದೇಶದಲ್ಲೇ ಇದು ಗಮನಾರ್ಹ ಸಾಧನೆಯಾಗಿದೆ. ಬೇರೆ ಯಾವ ನಗರಗಳೂ ಕನಿಷ್ಠ 3 ಅಂಕ ಗಳಿಸಿಲ್ಲ.

ಸಂಸ್ಕರಿಸಿದ ಗೃಹ ತ್ಯಾಜ್ಯವನ್ನು ಮರುಬಳಕೆ ಮಾಡಲು ಸಂಸ್ಕರಿಸಿದ ಬಳಸಿದ ನೀರಿನ ನೀತಿಯನ್ನು ಅಳವಡಿಸಿಕೊಂಡಿರುವ 10 ರಾಜ್ಯಗಳು, ಬಳಸಿದ ನೀರಿನ ನಿರ್ವಹಣೆ ಎಂಬ ವಿಷಯಾಧಾರಿತವಾಗಿ ಅಧ್ಯಯನ ನಡೆಸಲಾಗಿತ್ತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) 2021 ರಲ್ಲಿ ಪ್ರಕಟಿಸಿದ ಇತ್ತೀಚಿನ ರಾಷ್ಟ್ರೀಯ ಮಟ್ಟದ ಒಳಚರಂಡಿ ದಾಸ್ತಾನು ದತ್ತಾಂಶವನ್ನು ಆಧರಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ.

ಸದ್ಯ ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯಲು ಯೋಗ್ಯವಲ್ಲದ ಉದ್ದೇಶಗಳಿಗೆ (ತೋಟಗಾರಿಕೆ ಮತ್ತು ಕೈಗಾರಿಕೆಗಳಿಗೆ) ಸಂಸ್ಕರಿಸಿದ ನೀರು ಬಳಸಬಹುದಾಗಿದೆ. ಬೆಂಗಳೂರು ಜಲಮಂಡಳಿಯೂ ನೀರಿನ ಮರುಬಳಕೆಯನ್ನು ಉಲ್ಲೇಖಿಸಿತ್ತು.

  • ಅಂತರ್ಜಾಲ ಮಾಹಿತಿ

Bangalore is ranked in the top 5 in water management. While Surat ranks first in water management, Bengaluru (Bengaluru Water Crisis) ranks second. A survey conducted by the think tank Council on Energy, Water and Environment has come to light. 500 cities out of 10 states of the country were included in the survey.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

3 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

3 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

3 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

3 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

3 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

3 hours ago