Advertisement
MIRROR FOCUS

ಬೆಂಗಳೂರಿಗೆ ನೀರಿನ ಕೊರತೆ | ಆದರೂ ನೀರಿನ ನಿರ್ವಹಣೆಯಲ್ಲಿ ಬೆಂಗಳೂರು ದೇಶದಲ್ಲೇ ನಂ.2

Share

ನೀರಿಲ್ಲ, ನೀರಿಲ್ಲ.. ಬೆಂಗಳೂರಿನಲ್ಲಿ(Bengaluru) ನೀರಿಲ್ಲ(No water) ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮಳೆ ಬರಲು ಇನ್ನು 2-3 ತಿಂಗಳು ಬಾಕಿ ಇದೆ. ಅಲ್ಲಿ ತನಕ ಬೆಂಗಳೂರಿಗೆ ನೀರಿನ ಕೊರತೆ ತೀವ್ರವಾಗಿ(Water crisis) ಕಾಡಲಿದೆ ಎಂದು ಭಾವಿಸಲಾಗಿದೆ. ಈ ಮಧ್ಯೆಯೂ ನೀರಿನ ನಿರ್ವಹಣೆಯಲ್ಲಿ(Water management) ಬೆಂಗಳೂರು ಟಾಪ್‌ 5 ರಲ್ಲಿ ಸ್ಥಾನ ಪಡೆದಿದೆ. ಬಳಸಿದ ನೀರು ನಿರ್ವಹಣೆಯಲ್ಲಿ ಸೂರತ್‌ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು (Bengaluru Water Crisis) 2ನೇ ಸ್ಥಾನದಲ್ಲಿದೆ. ಥಿಂಕ್ ಟ್ಯಾಂಕ್ ಕೌನ್ಸಿಲ್ ಆನ್ ಎನರ್ಜಿ, ವಾಟರ್ ಆ್ಯಂಡ್ ಎನ್ವಿರಾನ್‌ಮೆಂಟ್‌ ನಡೆಸಿದ ಸರ್ವೇ(Survey) ಈ ಅಂಶ ಬೆಳಕಿಗೆ ಬಂದಿದೆ. ದೇಶದ 10 ರಾಜ್ಯಗಳ ಪೈಕಿ 500 ನಗರಗಳನ್ನು ಸರ್ವೇಗೆ ಒಳಪಡಿಸಲಾಗಿತ್ತು.

Advertisement
Advertisement

ಬಳಸಿದ ನೀರು ನಿರ್ವಹಣೆಯಲ್ಲಿ ಸೂರತ್‌ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಸಂಶೋಧನೆಗಳ ಆಧಾರದಲ್ಲಿ ಸೂರತ್‌ಗೆ 3.32 ಅಂಕಗಳ ಮೂಲಕ ಮೊದಲ ಸ್ಥಾನ ಇದೆ. ಬೆಂಗಳೂರು 5 ಅಂಕಗಳಿಗೆ 3.23 ಅಂಕ ಪಡೆದು 2ನೇ ಸ್ಥಾನದಲ್ಲಿದೆ. ಬಳಸಿದ ನೀರು ಮರುಬಳಕೆ ವಿಚಾರದಲ್ಲಿ ದೇಶದಲ್ಲೇ ಇದು ಗಮನಾರ್ಹ ಸಾಧನೆಯಾಗಿದೆ. ಬೇರೆ ಯಾವ ನಗರಗಳೂ ಕನಿಷ್ಠ 3 ಅಂಕ ಗಳಿಸಿಲ್ಲ.

Advertisement

ಸಂಸ್ಕರಿಸಿದ ಗೃಹ ತ್ಯಾಜ್ಯವನ್ನು ಮರುಬಳಕೆ ಮಾಡಲು ಸಂಸ್ಕರಿಸಿದ ಬಳಸಿದ ನೀರಿನ ನೀತಿಯನ್ನು ಅಳವಡಿಸಿಕೊಂಡಿರುವ 10 ರಾಜ್ಯಗಳು, ಬಳಸಿದ ನೀರಿನ ನಿರ್ವಹಣೆ ಎಂಬ ವಿಷಯಾಧಾರಿತವಾಗಿ ಅಧ್ಯಯನ ನಡೆಸಲಾಗಿತ್ತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) 2021 ರಲ್ಲಿ ಪ್ರಕಟಿಸಿದ ಇತ್ತೀಚಿನ ರಾಷ್ಟ್ರೀಯ ಮಟ್ಟದ ಒಳಚರಂಡಿ ದಾಸ್ತಾನು ದತ್ತಾಂಶವನ್ನು ಆಧರಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ.

ಸದ್ಯ ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯಲು ಯೋಗ್ಯವಲ್ಲದ ಉದ್ದೇಶಗಳಿಗೆ (ತೋಟಗಾರಿಕೆ ಮತ್ತು ಕೈಗಾರಿಕೆಗಳಿಗೆ) ಸಂಸ್ಕರಿಸಿದ ನೀರು ಬಳಸಬಹುದಾಗಿದೆ. ಬೆಂಗಳೂರು ಜಲಮಂಡಳಿಯೂ ನೀರಿನ ಮರುಬಳಕೆಯನ್ನು ಉಲ್ಲೇಖಿಸಿತ್ತು.

Advertisement
  • ಅಂತರ್ಜಾಲ ಮಾಹಿತಿ

Bangalore is ranked in the top 5 in water management. While Surat ranks first in water management, Bengaluru (Bengaluru Water Crisis) ranks second. A survey conducted by the think tank Council on Energy, Water and Environment has come to light. 500 cities out of 10 states of the country were included in the survey.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

2 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

16 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

17 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

17 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

17 hours ago