Advertisement
MIRROR FOCUS

ಡಿಸೆಂಬರ್‌ನಲ್ಲಿ ಇರಬೇಕಾದ ನದಿ ನೀರಿನ ಮಟ್ಟ ಸಪ್ಟಂಬರ್‌ ಮೊದಲ ವಾರದಲ್ಲೇ ತಲುಪಿದೆ…!

Share

ಮಳೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ಹೊಳೆ, ನದಿಯ ನೀರಿನ ಮಟ್ಟ ಈಗಲೇ ಕುಸಿತ ಆರಂಭವಾಗಿದೆ. ಹಲವಾರು ಗ್ರಾಮೀಣ ಭಾಗಗಳಲ್ಲೂ ನೀರಿನ ವರತೆ ಈಗಲೃ ಬರಿದಾಗಿದೆ. ಸಾಮಾನ್ಯವಾಗಿ ಡಿಸೆಂಬರ್‌ ಹೊತ್ತಿನಲ್ಲಿ ಇರಬೇಕಾದ ನೀರಿನ ಮಟ್ಟ ಈಗಲೇ ತಲುಪಿದೆ. ಹೀಗಾಗಿ ಇನ್ನುಳಿದ ದಿನಗಳಲ್ಲಿ ಮಳೆಯಾಗದೇ ಇದ್ದರೆ ಹೇಗೆ ಎನ್ನುವ ಆತಂಕ ಹಲವು ಕಡೆಗಳಲ್ಲಿ ಕೇಳಿಬರುತ್ತಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ಶಿಶಿಲಾ ನದಿಯಲ್ಲಿ ಕೂಡಾ ನೀರಿನ ಮಟ್ಟ ಇಳಿಕೆಯಾಗಿದೆ. ನೇರವಾಗಿ ಕಾಡಿನಿಂದಲೇ ಆರಂಭವಾಗುವ ಈ ನದಿಯ ಆರಂಭವೇ ಶಿಶಿಲ ದೇವಸ್ಥಾನದ ಪಕ್ಕದಲ್ಲಿದೆ. ಇಲ್ಲಿ ಕೂಡಾ ಈಗಲೇ  ನೀರಿನ ಮಟ್ಟ ಇಳಿಕೆಯಾಗಿರುವುದು ಹಾಗೂ ಡಿಸೆಂಬರ್‌ ಸಮಯಕ್ಕೆ ಇರಬೇಕಾದ ನೀರಿನ ಮಟ್ಟ ಈಗ ಇದೆ ಎಂದು ಹೇಳುತ್ತಾರೆ ಇಲ್ಲಿನ ನಿವಾಸಿಗಳು. ಇಲ್ಲಿ ದೇವರ ಮೀನಿಗಳು ಸಾಕಷ್ಟು ಇದೆ, ನೀರಿನ ಕೊರತೆಯಾದರೆ ಮೀನಿಉಗಳಿಗೂ ಸಂಕಷ್ಟವಾಗಲಿದೆ. ಹೀಗಾಗಿ ನೀರಿನ ಕೊರತೆಯಾಗದಂತೆ ಇಲ್ಲಿ ಬಹಳ ಎಚ್ಚರಿಕೆ ವಹಿಸಬೇಕಿದೆ. ಇದಕ್ಕಾಗಿ ದೇವಸ್ಥಾನ ಹಾಗೂ ಆಸುಪಾಸಿನ ಜನರಿಗೂ ನೀರಿನ ಮಟ್ಟ ಇಳಿಕೆಯಾಗಿರುವುದು  ಆತಂಕವೇ ಹೌದು. ಗ್ರಾಮೀಣ ಭಾಗದಲ್ಲಿ ಈ ರೀತಿಯಾಗಿ ನೀರಿನ ಮಟ್ಟ ಇಳಿಕೆಯಾಗುವುದು  ಆತಂಕಕ್ಕೆ ಕಾರಣ.

ಈಗ ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ಮಧ್ಯಾಹ್ನದ ಹೊತ್ತಿಗೆ ವಾತಾವರಣದ ಉಷ್ಣತೆ ತೀವ್ರವಾಗಿ ಏರಿಕೆಯಾಗುತ್ತಿದೆ. ಸುಮಾರು 33 ಡಿಗ್ರಿಯಿಂದಲೇ ಆರಂಭವಾಗುತ್ತದೆ. ಇದು ಕೂಡಾ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಭತ್ತದ ಗದ್ದೆಗಳಿಗೆ ನೀರುಣಿಸಬೇಕಾದ ಸ್ಥಿತಿ ಹಲವು ಕಡೆ ಇದೆ. ಗ್ರಾಮೀಣ ಭಾಗಗಳಲ್ಲಿ ಈಗಲೇ ನೀರಿನ ಕೊರತೆ ಹೀಗಾದರೆ ನಗರ ಪ್ರದೇಶಗಳ ಕತೆ ಏನಾಗಬೇಡ ಎಂಬುದು ಹಲವು ಕಡೆ ಚರ್ಚೆಯಾಗುವ ಸಂಗತಿ. ಎಲ್ಲಾ ಕಡೆಯೂ ಈಗ ಮಾತು, “ಮಳೆಯ ಅವಸ್ಥೆ ಎಂತ” ಅಂತಲೇ…!.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

5 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago