MIRROR FOCUS

ಡಿಸೆಂಬರ್‌ನಲ್ಲಿ ಇರಬೇಕಾದ ನದಿ ನೀರಿನ ಮಟ್ಟ ಸಪ್ಟಂಬರ್‌ ಮೊದಲ ವಾರದಲ್ಲೇ ತಲುಪಿದೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ಹೊಳೆ, ನದಿಯ ನೀರಿನ ಮಟ್ಟ ಈಗಲೇ ಕುಸಿತ ಆರಂಭವಾಗಿದೆ. ಹಲವಾರು ಗ್ರಾಮೀಣ ಭಾಗಗಳಲ್ಲೂ ನೀರಿನ ವರತೆ ಈಗಲೃ ಬರಿದಾಗಿದೆ. ಸಾಮಾನ್ಯವಾಗಿ ಡಿಸೆಂಬರ್‌ ಹೊತ್ತಿನಲ್ಲಿ ಇರಬೇಕಾದ ನೀರಿನ ಮಟ್ಟ ಈಗಲೇ ತಲುಪಿದೆ. ಹೀಗಾಗಿ ಇನ್ನುಳಿದ ದಿನಗಳಲ್ಲಿ ಮಳೆಯಾಗದೇ ಇದ್ದರೆ ಹೇಗೆ ಎನ್ನುವ ಆತಂಕ ಹಲವು ಕಡೆಗಳಲ್ಲಿ ಕೇಳಿಬರುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ಶಿಶಿಲಾ ನದಿಯಲ್ಲಿ ಕೂಡಾ ನೀರಿನ ಮಟ್ಟ ಇಳಿಕೆಯಾಗಿದೆ. ನೇರವಾಗಿ ಕಾಡಿನಿಂದಲೇ ಆರಂಭವಾಗುವ ಈ ನದಿಯ ಆರಂಭವೇ ಶಿಶಿಲ ದೇವಸ್ಥಾನದ ಪಕ್ಕದಲ್ಲಿದೆ. ಇಲ್ಲಿ ಕೂಡಾ ಈಗಲೇ  ನೀರಿನ ಮಟ್ಟ ಇಳಿಕೆಯಾಗಿರುವುದು ಹಾಗೂ ಡಿಸೆಂಬರ್‌ ಸಮಯಕ್ಕೆ ಇರಬೇಕಾದ ನೀರಿನ ಮಟ್ಟ ಈಗ ಇದೆ ಎಂದು ಹೇಳುತ್ತಾರೆ ಇಲ್ಲಿನ ನಿವಾಸಿಗಳು. ಇಲ್ಲಿ ದೇವರ ಮೀನಿಗಳು ಸಾಕಷ್ಟು ಇದೆ, ನೀರಿನ ಕೊರತೆಯಾದರೆ ಮೀನಿಉಗಳಿಗೂ ಸಂಕಷ್ಟವಾಗಲಿದೆ. ಹೀಗಾಗಿ ನೀರಿನ ಕೊರತೆಯಾಗದಂತೆ ಇಲ್ಲಿ ಬಹಳ ಎಚ್ಚರಿಕೆ ವಹಿಸಬೇಕಿದೆ. ಇದಕ್ಕಾಗಿ ದೇವಸ್ಥಾನ ಹಾಗೂ ಆಸುಪಾಸಿನ ಜನರಿಗೂ ನೀರಿನ ಮಟ್ಟ ಇಳಿಕೆಯಾಗಿರುವುದು  ಆತಂಕವೇ ಹೌದು. ಗ್ರಾಮೀಣ ಭಾಗದಲ್ಲಿ ಈ ರೀತಿಯಾಗಿ ನೀರಿನ ಮಟ್ಟ ಇಳಿಕೆಯಾಗುವುದು  ಆತಂಕಕ್ಕೆ ಕಾರಣ.

ಈಗ ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ಮಧ್ಯಾಹ್ನದ ಹೊತ್ತಿಗೆ ವಾತಾವರಣದ ಉಷ್ಣತೆ ತೀವ್ರವಾಗಿ ಏರಿಕೆಯಾಗುತ್ತಿದೆ. ಸುಮಾರು 33 ಡಿಗ್ರಿಯಿಂದಲೇ ಆರಂಭವಾಗುತ್ತದೆ. ಇದು ಕೂಡಾ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಭತ್ತದ ಗದ್ದೆಗಳಿಗೆ ನೀರುಣಿಸಬೇಕಾದ ಸ್ಥಿತಿ ಹಲವು ಕಡೆ ಇದೆ. ಗ್ರಾಮೀಣ ಭಾಗಗಳಲ್ಲಿ ಈಗಲೇ ನೀರಿನ ಕೊರತೆ ಹೀಗಾದರೆ ನಗರ ಪ್ರದೇಶಗಳ ಕತೆ ಏನಾಗಬೇಡ ಎಂಬುದು ಹಲವು ಕಡೆ ಚರ್ಚೆಯಾಗುವ ಸಂಗತಿ. ಎಲ್ಲಾ ಕಡೆಯೂ ಈಗ ಮಾತು, “ಮಳೆಯ ಅವಸ್ಥೆ ಎಂತ” ಅಂತಲೇ…!.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…

23 hours ago

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ

ಗ್ರೇಟರ್ ಬೆಂಗಳೂರು  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…

23 hours ago

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…

23 hours ago

ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ

ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…

1 day ago

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ…

2 days ago

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ

ಬಾಂಗ್ಲಾದೇಶದಲ್ಲಿ  ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ  ರೋಗಿಗಳ…

2 days ago