Advertisement
MIRROR FOCUS

ಡಿಸೆಂಬರ್‌ನಲ್ಲಿ ಇರಬೇಕಾದ ನದಿ ನೀರಿನ ಮಟ್ಟ ಸಪ್ಟಂಬರ್‌ ಮೊದಲ ವಾರದಲ್ಲೇ ತಲುಪಿದೆ…!

Share

ಮಳೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ಹೊಳೆ, ನದಿಯ ನೀರಿನ ಮಟ್ಟ ಈಗಲೇ ಕುಸಿತ ಆರಂಭವಾಗಿದೆ. ಹಲವಾರು ಗ್ರಾಮೀಣ ಭಾಗಗಳಲ್ಲೂ ನೀರಿನ ವರತೆ ಈಗಲೃ ಬರಿದಾಗಿದೆ. ಸಾಮಾನ್ಯವಾಗಿ ಡಿಸೆಂಬರ್‌ ಹೊತ್ತಿನಲ್ಲಿ ಇರಬೇಕಾದ ನೀರಿನ ಮಟ್ಟ ಈಗಲೇ ತಲುಪಿದೆ. ಹೀಗಾಗಿ ಇನ್ನುಳಿದ ದಿನಗಳಲ್ಲಿ ಮಳೆಯಾಗದೇ ಇದ್ದರೆ ಹೇಗೆ ಎನ್ನುವ ಆತಂಕ ಹಲವು ಕಡೆಗಳಲ್ಲಿ ಕೇಳಿಬರುತ್ತಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ಶಿಶಿಲಾ ನದಿಯಲ್ಲಿ ಕೂಡಾ ನೀರಿನ ಮಟ್ಟ ಇಳಿಕೆಯಾಗಿದೆ. ನೇರವಾಗಿ ಕಾಡಿನಿಂದಲೇ ಆರಂಭವಾಗುವ ಈ ನದಿಯ ಆರಂಭವೇ ಶಿಶಿಲ ದೇವಸ್ಥಾನದ ಪಕ್ಕದಲ್ಲಿದೆ. ಇಲ್ಲಿ ಕೂಡಾ ಈಗಲೇ  ನೀರಿನ ಮಟ್ಟ ಇಳಿಕೆಯಾಗಿರುವುದು ಹಾಗೂ ಡಿಸೆಂಬರ್‌ ಸಮಯಕ್ಕೆ ಇರಬೇಕಾದ ನೀರಿನ ಮಟ್ಟ ಈಗ ಇದೆ ಎಂದು ಹೇಳುತ್ತಾರೆ ಇಲ್ಲಿನ ನಿವಾಸಿಗಳು. ಇಲ್ಲಿ ದೇವರ ಮೀನಿಗಳು ಸಾಕಷ್ಟು ಇದೆ, ನೀರಿನ ಕೊರತೆಯಾದರೆ ಮೀನಿಉಗಳಿಗೂ ಸಂಕಷ್ಟವಾಗಲಿದೆ. ಹೀಗಾಗಿ ನೀರಿನ ಕೊರತೆಯಾಗದಂತೆ ಇಲ್ಲಿ ಬಹಳ ಎಚ್ಚರಿಕೆ ವಹಿಸಬೇಕಿದೆ. ಇದಕ್ಕಾಗಿ ದೇವಸ್ಥಾನ ಹಾಗೂ ಆಸುಪಾಸಿನ ಜನರಿಗೂ ನೀರಿನ ಮಟ್ಟ ಇಳಿಕೆಯಾಗಿರುವುದು  ಆತಂಕವೇ ಹೌದು. ಗ್ರಾಮೀಣ ಭಾಗದಲ್ಲಿ ಈ ರೀತಿಯಾಗಿ ನೀರಿನ ಮಟ್ಟ ಇಳಿಕೆಯಾಗುವುದು  ಆತಂಕಕ್ಕೆ ಕಾರಣ.

Advertisement

ಈಗ ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ಮಧ್ಯಾಹ್ನದ ಹೊತ್ತಿಗೆ ವಾತಾವರಣದ ಉಷ್ಣತೆ ತೀವ್ರವಾಗಿ ಏರಿಕೆಯಾಗುತ್ತಿದೆ. ಸುಮಾರು 33 ಡಿಗ್ರಿಯಿಂದಲೇ ಆರಂಭವಾಗುತ್ತದೆ. ಇದು ಕೂಡಾ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಭತ್ತದ ಗದ್ದೆಗಳಿಗೆ ನೀರುಣಿಸಬೇಕಾದ ಸ್ಥಿತಿ ಹಲವು ಕಡೆ ಇದೆ. ಗ್ರಾಮೀಣ ಭಾಗಗಳಲ್ಲಿ ಈಗಲೇ ನೀರಿನ ಕೊರತೆ ಹೀಗಾದರೆ ನಗರ ಪ್ರದೇಶಗಳ ಕತೆ ಏನಾಗಬೇಡ ಎಂಬುದು ಹಲವು ಕಡೆ ಚರ್ಚೆಯಾಗುವ ಸಂಗತಿ. ಎಲ್ಲಾ ಕಡೆಯೂ ಈಗ ಮಾತು, “ಮಳೆಯ ಅವಸ್ಥೆ ಎಂತ” ಅಂತಲೇ…!.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

15 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

16 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

16 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

16 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

19 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

19 hours ago