Advertisement
MIRROR FOCUS

ಡಿಸೆಂಬರ್‌ನಲ್ಲಿ ಇರಬೇಕಾದ ನದಿ ನೀರಿನ ಮಟ್ಟ ಸಪ್ಟಂಬರ್‌ ಮೊದಲ ವಾರದಲ್ಲೇ ತಲುಪಿದೆ…!

Share

ಮಳೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ಹೊಳೆ, ನದಿಯ ನೀರಿನ ಮಟ್ಟ ಈಗಲೇ ಕುಸಿತ ಆರಂಭವಾಗಿದೆ. ಹಲವಾರು ಗ್ರಾಮೀಣ ಭಾಗಗಳಲ್ಲೂ ನೀರಿನ ವರತೆ ಈಗಲೃ ಬರಿದಾಗಿದೆ. ಸಾಮಾನ್ಯವಾಗಿ ಡಿಸೆಂಬರ್‌ ಹೊತ್ತಿನಲ್ಲಿ ಇರಬೇಕಾದ ನೀರಿನ ಮಟ್ಟ ಈಗಲೇ ತಲುಪಿದೆ. ಹೀಗಾಗಿ ಇನ್ನುಳಿದ ದಿನಗಳಲ್ಲಿ ಮಳೆಯಾಗದೇ ಇದ್ದರೆ ಹೇಗೆ ಎನ್ನುವ ಆತಂಕ ಹಲವು ಕಡೆಗಳಲ್ಲಿ ಕೇಳಿಬರುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ಶಿಶಿಲಾ ನದಿಯಲ್ಲಿ ಕೂಡಾ ನೀರಿನ ಮಟ್ಟ ಇಳಿಕೆಯಾಗಿದೆ. ನೇರವಾಗಿ ಕಾಡಿನಿಂದಲೇ ಆರಂಭವಾಗುವ ಈ ನದಿಯ ಆರಂಭವೇ ಶಿಶಿಲ ದೇವಸ್ಥಾನದ ಪಕ್ಕದಲ್ಲಿದೆ. ಇಲ್ಲಿ ಕೂಡಾ ಈಗಲೇ  ನೀರಿನ ಮಟ್ಟ ಇಳಿಕೆಯಾಗಿರುವುದು ಹಾಗೂ ಡಿಸೆಂಬರ್‌ ಸಮಯಕ್ಕೆ ಇರಬೇಕಾದ ನೀರಿನ ಮಟ್ಟ ಈಗ ಇದೆ ಎಂದು ಹೇಳುತ್ತಾರೆ ಇಲ್ಲಿನ ನಿವಾಸಿಗಳು. ಇಲ್ಲಿ ದೇವರ ಮೀನಿಗಳು ಸಾಕಷ್ಟು ಇದೆ, ನೀರಿನ ಕೊರತೆಯಾದರೆ ಮೀನಿಉಗಳಿಗೂ ಸಂಕಷ್ಟವಾಗಲಿದೆ. ಹೀಗಾಗಿ ನೀರಿನ ಕೊರತೆಯಾಗದಂತೆ ಇಲ್ಲಿ ಬಹಳ ಎಚ್ಚರಿಕೆ ವಹಿಸಬೇಕಿದೆ. ಇದಕ್ಕಾಗಿ ದೇವಸ್ಥಾನ ಹಾಗೂ ಆಸುಪಾಸಿನ ಜನರಿಗೂ ನೀರಿನ ಮಟ್ಟ ಇಳಿಕೆಯಾಗಿರುವುದು  ಆತಂಕವೇ ಹೌದು. ಗ್ರಾಮೀಣ ಭಾಗದಲ್ಲಿ ಈ ರೀತಿಯಾಗಿ ನೀರಿನ ಮಟ್ಟ ಇಳಿಕೆಯಾಗುವುದು  ಆತಂಕಕ್ಕೆ ಕಾರಣ.

ಈಗ ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ಮಧ್ಯಾಹ್ನದ ಹೊತ್ತಿಗೆ ವಾತಾವರಣದ ಉಷ್ಣತೆ ತೀವ್ರವಾಗಿ ಏರಿಕೆಯಾಗುತ್ತಿದೆ. ಸುಮಾರು 33 ಡಿಗ್ರಿಯಿಂದಲೇ ಆರಂಭವಾಗುತ್ತದೆ. ಇದು ಕೂಡಾ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಭತ್ತದ ಗದ್ದೆಗಳಿಗೆ ನೀರುಣಿಸಬೇಕಾದ ಸ್ಥಿತಿ ಹಲವು ಕಡೆ ಇದೆ. ಗ್ರಾಮೀಣ ಭಾಗಗಳಲ್ಲಿ ಈಗಲೇ ನೀರಿನ ಕೊರತೆ ಹೀಗಾದರೆ ನಗರ ಪ್ರದೇಶಗಳ ಕತೆ ಏನಾಗಬೇಡ ಎಂಬುದು ಹಲವು ಕಡೆ ಚರ್ಚೆಯಾಗುವ ಸಂಗತಿ. ಎಲ್ಲಾ ಕಡೆಯೂ ಈಗ ಮಾತು, “ಮಳೆಯ ಅವಸ್ಥೆ ಎಂತ” ಅಂತಲೇ…!.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago