Advertisement
MIRROR FOCUS

ಡಿಸೆಂಬರ್‌ನಲ್ಲಿ ಇರಬೇಕಾದ ನದಿ ನೀರಿನ ಮಟ್ಟ ಸಪ್ಟಂಬರ್‌ ಮೊದಲ ವಾರದಲ್ಲೇ ತಲುಪಿದೆ…!

Share

ಮಳೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಹೀಗಾಗಿ ಹೊಳೆ, ನದಿಯ ನೀರಿನ ಮಟ್ಟ ಈಗಲೇ ಕುಸಿತ ಆರಂಭವಾಗಿದೆ. ಹಲವಾರು ಗ್ರಾಮೀಣ ಭಾಗಗಳಲ್ಲೂ ನೀರಿನ ವರತೆ ಈಗಲೃ ಬರಿದಾಗಿದೆ. ಸಾಮಾನ್ಯವಾಗಿ ಡಿಸೆಂಬರ್‌ ಹೊತ್ತಿನಲ್ಲಿ ಇರಬೇಕಾದ ನೀರಿನ ಮಟ್ಟ ಈಗಲೇ ತಲುಪಿದೆ. ಹೀಗಾಗಿ ಇನ್ನುಳಿದ ದಿನಗಳಲ್ಲಿ ಮಳೆಯಾಗದೇ ಇದ್ದರೆ ಹೇಗೆ ಎನ್ನುವ ಆತಂಕ ಹಲವು ಕಡೆಗಳಲ್ಲಿ ಕೇಳಿಬರುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ಶಿಶಿಲಾ ನದಿಯಲ್ಲಿ ಕೂಡಾ ನೀರಿನ ಮಟ್ಟ ಇಳಿಕೆಯಾಗಿದೆ. ನೇರವಾಗಿ ಕಾಡಿನಿಂದಲೇ ಆರಂಭವಾಗುವ ಈ ನದಿಯ ಆರಂಭವೇ ಶಿಶಿಲ ದೇವಸ್ಥಾನದ ಪಕ್ಕದಲ್ಲಿದೆ. ಇಲ್ಲಿ ಕೂಡಾ ಈಗಲೇ  ನೀರಿನ ಮಟ್ಟ ಇಳಿಕೆಯಾಗಿರುವುದು ಹಾಗೂ ಡಿಸೆಂಬರ್‌ ಸಮಯಕ್ಕೆ ಇರಬೇಕಾದ ನೀರಿನ ಮಟ್ಟ ಈಗ ಇದೆ ಎಂದು ಹೇಳುತ್ತಾರೆ ಇಲ್ಲಿನ ನಿವಾಸಿಗಳು. ಇಲ್ಲಿ ದೇವರ ಮೀನಿಗಳು ಸಾಕಷ್ಟು ಇದೆ, ನೀರಿನ ಕೊರತೆಯಾದರೆ ಮೀನಿಉಗಳಿಗೂ ಸಂಕಷ್ಟವಾಗಲಿದೆ. ಹೀಗಾಗಿ ನೀರಿನ ಕೊರತೆಯಾಗದಂತೆ ಇಲ್ಲಿ ಬಹಳ ಎಚ್ಚರಿಕೆ ವಹಿಸಬೇಕಿದೆ. ಇದಕ್ಕಾಗಿ ದೇವಸ್ಥಾನ ಹಾಗೂ ಆಸುಪಾಸಿನ ಜನರಿಗೂ ನೀರಿನ ಮಟ್ಟ ಇಳಿಕೆಯಾಗಿರುವುದು  ಆತಂಕವೇ ಹೌದು. ಗ್ರಾಮೀಣ ಭಾಗದಲ್ಲಿ ಈ ರೀತಿಯಾಗಿ ನೀರಿನ ಮಟ್ಟ ಇಳಿಕೆಯಾಗುವುದು  ಆತಂಕಕ್ಕೆ ಕಾರಣ.

ಈಗ ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ಮಧ್ಯಾಹ್ನದ ಹೊತ್ತಿಗೆ ವಾತಾವರಣದ ಉಷ್ಣತೆ ತೀವ್ರವಾಗಿ ಏರಿಕೆಯಾಗುತ್ತಿದೆ. ಸುಮಾರು 33 ಡಿಗ್ರಿಯಿಂದಲೇ ಆರಂಭವಾಗುತ್ತದೆ. ಇದು ಕೂಡಾ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಭತ್ತದ ಗದ್ದೆಗಳಿಗೆ ನೀರುಣಿಸಬೇಕಾದ ಸ್ಥಿತಿ ಹಲವು ಕಡೆ ಇದೆ. ಗ್ರಾಮೀಣ ಭಾಗಗಳಲ್ಲಿ ಈಗಲೇ ನೀರಿನ ಕೊರತೆ ಹೀಗಾದರೆ ನಗರ ಪ್ರದೇಶಗಳ ಕತೆ ಏನಾಗಬೇಡ ಎಂಬುದು ಹಲವು ಕಡೆ ಚರ್ಚೆಯಾಗುವ ಸಂಗತಿ. ಎಲ್ಲಾ ಕಡೆಯೂ ಈಗ ಮಾತು, “ಮಳೆಯ ಅವಸ್ಥೆ ಎಂತ” ಅಂತಲೇ…!.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

5 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago