Advertisement
MIRROR FOCUS

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

Share

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ  ದೀದಿ’ ಕೋಲಾರ ಜಿಲ್ಲೆಯಲ್ಲಿ   ಅನುಷ್ಠಾನಗೊಂಡಿದೆ. ಈ ಯೋಜನೆ ಮೂಲಕ  ಕೃಷಿ ಕಾರ್ಮಿಕರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರನ್ನು ಗುರುತಿಸಿ  ಅವರಿಗೆ  ಆರ್ಥಿಕ ಸಹಾಯ ಹಾಗೂ  ವೃತ್ತಿ ತರಬೇತಿ ನೀಡಲಾಗುತ್ತದೆ.

Advertisement
Advertisement

ಮುಳಬಾಗಿಲು ತಾಲೂಕಿನ  ವಿರೂಪಾಕ್ಷಿ  ಗ್ರಾಮದಲ್ಲಿ  ಕೃಷಿ ಸಖಿ ಮತ್ತು ಪಶು ಸಖಿಯರು  ಮೊಬೈಲ್ ಆಪ್ ಮೂಲಕ  ಸಮೀಕ್ಷೆ ನಡೆಸಿದ್ದಾರೆ.  ಮಹಿಳಾ ಸ್ವಸಹಾಯ ಸಂಘದಿಂದ  ಸಾಲ ಪಡೆದು  ತಾವು ಟೈಲರಿಂಗ್  ವೃತ್ತಿ ಕೈಗೊಂಡಿದ್ದು, ಅದರಿಂದ ಆರ್ಥಿಕವಾಗಿಯೂ ದೃಢವಾಗಲು ಸಾಧ್ಯವಾಗುತ್ತಿದೆ ಎನ್ನುತ್ತಾರೆ ಕೋಲಾರದ ಸುಮಿತ್ರಮ್ಮ.

ಏನಿದು ಲಕ್‌ ಪತಿ ದೀದಿ : ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಲಕ್ ಪತಿ ದೀದಿ ಯೋಜನೆಯ ಉದ್ದೇಶ. ಮಹಿಳಾ ಸ್ವಯಂ ಸ್ವಸಹಾಯ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವ 9 ಕೋಟಿ ಮಹಿಳೆಯರಿದ್ದಾರೆ. ಸ್ವಸಹಾಯ ಗುಂಪುಗಳ ಸಹಾಯ ಪಡೆದು ಇವರೆಲ್ಲರೂ ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಈ ಸ್ವಸಹಾಯ ಗುಂಪುಗಳಿಗೆ ಸಂಬಂಧಪಟ್ಟಂತೆ ಮತ್ತು ಇವುಗಳ ಮೂಲಕ ಮಹಿಳೆಯರ ಆದಾಯ ಹೆಚ್ಚಿಸಲು ಲಕ್ ಪತಿ ದೀದಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲಿ ಸ್ವಂತವಾದ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷ ರೂ.ಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡಲು ಹೊರಟಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:  ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶ. ಈ  ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ, ಆರ್ಥಿಕ ಸಾಕ್ಷರತಾ ಕಾರ್ಯಾಗಾರಗಳು.
ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಗಳು,ಡಿಜಿಟಲ್ ಸಾಕ್ಷರತೆ ಮೊದಲಾದ ಸೌಲಭ್ಯಗಳು ಸಿಗುತ್ತವೆ.

ಈ ಯೋಜನೆಯಿಂದಾಗಿ ಮಹಿಳೆಯರ ಆದಾಯ ಹೆಚ್ಚಳ ಮತ್ತು ಆರ್ಥಿಕ ಸ್ಥಿತಿ ಸುಧಾರಣೆ, ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳ ವೃದ್ಧಿ,  ಮಹಿಳೆಯರ ಸಾಮಾಜಿಕ ಸ್ಥಾನಮಾನ ಹೆಚ್ಚಳ ಸೇರಿದಂತೆ ವಿವಿಧ ಪ್ರಯೋಜನಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

4 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago