Advertisement
MIRROR FOCUS

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

Share

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ  ದೀದಿ’ ಕೋಲಾರ ಜಿಲ್ಲೆಯಲ್ಲಿ   ಅನುಷ್ಠಾನಗೊಂಡಿದೆ. ಈ ಯೋಜನೆ ಮೂಲಕ  ಕೃಷಿ ಕಾರ್ಮಿಕರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರನ್ನು ಗುರುತಿಸಿ  ಅವರಿಗೆ  ಆರ್ಥಿಕ ಸಹಾಯ ಹಾಗೂ  ವೃತ್ತಿ ತರಬೇತಿ ನೀಡಲಾಗುತ್ತದೆ.

ಮುಳಬಾಗಿಲು ತಾಲೂಕಿನ  ವಿರೂಪಾಕ್ಷಿ  ಗ್ರಾಮದಲ್ಲಿ  ಕೃಷಿ ಸಖಿ ಮತ್ತು ಪಶು ಸಖಿಯರು  ಮೊಬೈಲ್ ಆಪ್ ಮೂಲಕ  ಸಮೀಕ್ಷೆ ನಡೆಸಿದ್ದಾರೆ.  ಮಹಿಳಾ ಸ್ವಸಹಾಯ ಸಂಘದಿಂದ  ಸಾಲ ಪಡೆದು  ತಾವು ಟೈಲರಿಂಗ್  ವೃತ್ತಿ ಕೈಗೊಂಡಿದ್ದು, ಅದರಿಂದ ಆರ್ಥಿಕವಾಗಿಯೂ ದೃಢವಾಗಲು ಸಾಧ್ಯವಾಗುತ್ತಿದೆ ಎನ್ನುತ್ತಾರೆ ಕೋಲಾರದ ಸುಮಿತ್ರಮ್ಮ.

ಏನಿದು ಲಕ್‌ ಪತಿ ದೀದಿ : ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಲಕ್ ಪತಿ ದೀದಿ ಯೋಜನೆಯ ಉದ್ದೇಶ. ಮಹಿಳಾ ಸ್ವಯಂ ಸ್ವಸಹಾಯ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವ 9 ಕೋಟಿ ಮಹಿಳೆಯರಿದ್ದಾರೆ. ಸ್ವಸಹಾಯ ಗುಂಪುಗಳ ಸಹಾಯ ಪಡೆದು ಇವರೆಲ್ಲರೂ ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಈ ಸ್ವಸಹಾಯ ಗುಂಪುಗಳಿಗೆ ಸಂಬಂಧಪಟ್ಟಂತೆ ಮತ್ತು ಇವುಗಳ ಮೂಲಕ ಮಹಿಳೆಯರ ಆದಾಯ ಹೆಚ್ಚಿಸಲು ಲಕ್ ಪತಿ ದೀದಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲಿ ಸ್ವಂತವಾದ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷ ರೂ.ಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡಲು ಹೊರಟಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:  ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶ. ಈ  ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ, ಆರ್ಥಿಕ ಸಾಕ್ಷರತಾ ಕಾರ್ಯಾಗಾರಗಳು.
ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಗಳು,ಡಿಜಿಟಲ್ ಸಾಕ್ಷರತೆ ಮೊದಲಾದ ಸೌಲಭ್ಯಗಳು ಸಿಗುತ್ತವೆ.

ಈ ಯೋಜನೆಯಿಂದಾಗಿ ಮಹಿಳೆಯರ ಆದಾಯ ಹೆಚ್ಚಳ ಮತ್ತು ಆರ್ಥಿಕ ಸ್ಥಿತಿ ಸುಧಾರಣೆ, ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳ ವೃದ್ಧಿ,  ಮಹಿಳೆಯರ ಸಾಮಾಜಿಕ ಸ್ಥಾನಮಾನ ಹೆಚ್ಚಳ ಸೇರಿದಂತೆ ವಿವಿಧ ಪ್ರಯೋಜನಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 hour ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 hour ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 hour ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

17 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

17 hours ago