Advertisement
MIRROR FOCUS

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

Share

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ  ದೀದಿ’ ಕೋಲಾರ ಜಿಲ್ಲೆಯಲ್ಲಿ   ಅನುಷ್ಠಾನಗೊಂಡಿದೆ. ಈ ಯೋಜನೆ ಮೂಲಕ  ಕೃಷಿ ಕಾರ್ಮಿಕರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರನ್ನು ಗುರುತಿಸಿ  ಅವರಿಗೆ  ಆರ್ಥಿಕ ಸಹಾಯ ಹಾಗೂ  ವೃತ್ತಿ ತರಬೇತಿ ನೀಡಲಾಗುತ್ತದೆ.

ಮುಳಬಾಗಿಲು ತಾಲೂಕಿನ  ವಿರೂಪಾಕ್ಷಿ  ಗ್ರಾಮದಲ್ಲಿ  ಕೃಷಿ ಸಖಿ ಮತ್ತು ಪಶು ಸಖಿಯರು  ಮೊಬೈಲ್ ಆಪ್ ಮೂಲಕ  ಸಮೀಕ್ಷೆ ನಡೆಸಿದ್ದಾರೆ.  ಮಹಿಳಾ ಸ್ವಸಹಾಯ ಸಂಘದಿಂದ  ಸಾಲ ಪಡೆದು  ತಾವು ಟೈಲರಿಂಗ್  ವೃತ್ತಿ ಕೈಗೊಂಡಿದ್ದು, ಅದರಿಂದ ಆರ್ಥಿಕವಾಗಿಯೂ ದೃಢವಾಗಲು ಸಾಧ್ಯವಾಗುತ್ತಿದೆ ಎನ್ನುತ್ತಾರೆ ಕೋಲಾರದ ಸುಮಿತ್ರಮ್ಮ.

ಏನಿದು ಲಕ್‌ ಪತಿ ದೀದಿ : ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಲಕ್ ಪತಿ ದೀದಿ ಯೋಜನೆಯ ಉದ್ದೇಶ. ಮಹಿಳಾ ಸ್ವಯಂ ಸ್ವಸಹಾಯ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವ 9 ಕೋಟಿ ಮಹಿಳೆಯರಿದ್ದಾರೆ. ಸ್ವಸಹಾಯ ಗುಂಪುಗಳ ಸಹಾಯ ಪಡೆದು ಇವರೆಲ್ಲರೂ ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಈ ಸ್ವಸಹಾಯ ಗುಂಪುಗಳಿಗೆ ಸಂಬಂಧಪಟ್ಟಂತೆ ಮತ್ತು ಇವುಗಳ ಮೂಲಕ ಮಹಿಳೆಯರ ಆದಾಯ ಹೆಚ್ಚಿಸಲು ಲಕ್ ಪತಿ ದೀದಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲಿ ಸ್ವಂತವಾದ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷ ರೂ.ಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡಲು ಹೊರಟಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:  ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶ. ಈ  ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ, ಆರ್ಥಿಕ ಸಾಕ್ಷರತಾ ಕಾರ್ಯಾಗಾರಗಳು.
ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಗಳು,ಡಿಜಿಟಲ್ ಸಾಕ್ಷರತೆ ಮೊದಲಾದ ಸೌಲಭ್ಯಗಳು ಸಿಗುತ್ತವೆ.

ಈ ಯೋಜನೆಯಿಂದಾಗಿ ಮಹಿಳೆಯರ ಆದಾಯ ಹೆಚ್ಚಳ ಮತ್ತು ಆರ್ಥಿಕ ಸ್ಥಿತಿ ಸುಧಾರಣೆ, ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳ ವೃದ್ಧಿ,  ಮಹಿಳೆಯರ ಸಾಮಾಜಿಕ ಸ್ಥಾನಮಾನ ಹೆಚ್ಚಳ ಸೇರಿದಂತೆ ವಿವಿಧ ಪ್ರಯೋಜನಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago