ಈ ಹಳ್ಳಿಯ ಕೆರೆ ನೀರು ಜಾನುವಾರುಗಳಿಗೆ ಮಾತ್ರ….!

March 25, 2022
10:36 AM

ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

Advertisement
Advertisement

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗಬಹುದು. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ
February 10, 2026
6:57 AM
by: ಮಿರರ್‌ ಡೆಸ್ಕ್
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ….? | ಪ್ರೋತ್ಸಾಹಧನ 5 ರಿಂದ 7 ರೂ.ಗೆ ಹೆಚ್ಚಿಸುವ ಚಿಂತನೆ
February 10, 2026
6:40 AM
by: ಮಿರರ್‌ ಡೆಸ್ಕ್
ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ
February 10, 2026
5:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror