ಈ ಹಳ್ಳಿಯ ಕೆರೆ ನೀರು ಜಾನುವಾರುಗಳಿಗೆ ಮಾತ್ರ….!

March 25, 2022
10:36 AM

ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗಬಹುದು. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror