Advertisement
Categories: ರಾಜ್ಯ

ಈ ಹಳ್ಳಿಯ ಕೆರೆ ನೀರು ಜಾನುವಾರುಗಳಿಗೆ ಮಾತ್ರ….!

Share

ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗಬಹುದು. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

12 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

12 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago