Advertisement
Categories: ರಾಜ್ಯ

ಈ ಹಳ್ಳಿಯ ಕೆರೆ ನೀರು ಜಾನುವಾರುಗಳಿಗೆ ಮಾತ್ರ….!

Share

ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗಬಹುದು. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

23 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

24 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago