ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ ಇದೆ.
ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.
ರಾಜ್ಯದಲ್ಲಿ ಹೆಚ್ಚಿನ ಕೆರೆಗಳು ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.
ಮೂಲ- ಪರಿಸರ ಪರಿವಾರ
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…