Advertisement
Opinion

ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ

Share

ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು  ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ‌ ಇದೆ.

ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ‌ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು‌, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.

ರಾಜ್ಯದಲ್ಲಿ ಹೆಚ್ಚಿನ ಕೆರೆಗಳು‌ ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.

ಮೂಲ- ಪರಿಸರ ಪರಿವಾರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago