ಸುದ್ದಿಗಳು

ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆ ರಾಮಮಂದಿರ ಭೇಟಿ | ವಿಪರೀತ ನೂಕುನುಗ್ಗಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು  ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್‌ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ

Advertisement
Advertisement

ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್‌ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ

ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ

ಶ್ರೀರಾಮ ಜನ್ಮಭೂಮಿ  ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ.  ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.

Source : PTI

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

2 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

5 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

6 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…

14 hours ago