Advertisement
ಸುದ್ದಿಗಳು

ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆ ರಾಮಮಂದಿರ ಭೇಟಿ | ವಿಪರೀತ ನೂಕುನುಗ್ಗಲು |

Share

ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು  ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್‌ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ

ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್‌ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ

ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ

ಶ್ರೀರಾಮ ಜನ್ಮಭೂಮಿ  ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ.  ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.

Source : PTI

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

3 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 days ago