Advertisement
ಸುದ್ದಿಗಳು

ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆ ರಾಮಮಂದಿರ ಭೇಟಿ | ವಿಪರೀತ ನೂಕುನುಗ್ಗಲು |

Share

ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು  ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್‌ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ

ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್‌ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ

ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ

ಶ್ರೀರಾಮ ಜನ್ಮಭೂಮಿ  ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ.  ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.

Source : PTI

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

24 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

32 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

47 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago