ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ
ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ
ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.
Source : PTI
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…