ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ
ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ
ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.
Source : PTI
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…