Advertisement
ಸುದ್ದಿಗಳು

ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆ ರಾಮಮಂದಿರ ಭೇಟಿ | ವಿಪರೀತ ನೂಕುನುಗ್ಗಲು |

Share

ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು  ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್‌ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ

ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್‌ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ

ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ

ಶ್ರೀರಾಮ ಜನ್ಮಭೂಮಿ  ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ.  ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.

Source : PTI

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

4 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

13 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago