Advertisement
ಅನುಕ್ರಮ

ಜೈ ಜವಾನ್ ಜೈ ಕಿಸಾನ್ ನಾಯಕನ ಜನುಮದಿನವಿಂದು

Share

ಜಗತ್ತು ಯಾವತ್ತೂ ಬೆಲೆ ಕೊಡುವುದು, ತಲೆ ಬಾಗುವುದು ಪ್ರಾಮಾಣಿಕರಿಗೆ. ಒಂದೊಮ್ಮೆ ಕಣ್ಣಿಗೆ ಮಣ್ಣೆರಚಿ ನಾಯಕನಾಗ ಬಹುದು ಆದರೆ ಅದು ಅಲ್ಪ ಕಾಲದ ಯಶಸ್ಸು ಅಷ್ಟೇ.

Advertisement
Advertisement

ದೇಶದ ಏಳಿಗೆಗಾಗಿ ಒಬ್ಬ ವ್ಯಕ್ತಿ ಎಷ್ಟೆಲ್ಲಾ ತ್ಯಾಗ ಮಾಡಬಹುದೋ ಅದೆಲ್ಲವನ್ನೂ ಮಾಡಿದವರು ಲಾಲ್ ಬಹಾದ್ದೂರ್ ಶಾಸ್ತ್ರಿಯವರು. ಮನಗೆದ್ದು ಊರುಗೆಲ್ಲುವ ಅಪ್ರತಿಮ ಸಾಹಸಿ. ಸಾಹಸ ,ಸಹನೆ, ಚಾತುರ್ಯ, ಬುದ್ಧಿವಂತಿಕೆ ಕೌಶಲ್ಯಗಳಲ್ಲಿ ಯಾರಿಗೂ ಇವರು ಕಮ್ಮಿಯಿರಲಿಲ್ಲ. ಈ ಎಲ್ಲಾ ಗುಣಗಳು ಒಂದೆರಡು ದಿನಗಳಲ್ಲಿ ಬೆಳೆಸಿಕೊಂಡಂತಹ ಗುಣಗಳಲ್ಲ. ಅವರು ಬೆಳೆದು ಬಂದ ಪರಿಸರ ಹಾಗೂ ಪರಿಸ್ಥಿತಿಯ ಪರಿಣಾಮವಾಗಿ ಮೈಗೂಡಿಸಿಕೊಂಡ ಗುಣಗಳು.
ಅವರು 2 ಅಕ್ಟೋಬರ್ 1904 ರಂದು ಕಾಶಿಯ ಬಳಿಯಿರುವ ಮೊಘಲ್ ಸರಾಯ್ ಎಂಬ ಊರಿನಲ್ಲಿ ಜನಿಸಿದರು. ತಂದೆ ಶಾರದಾ ಪ್ರಸಾದ್, ತಾಯಿ ರಾಂ ದುಲಾರಿ..

ಅಧ್ಯಾಪನ, ಗುಮಾಸ್ತರಾಗಿ ಅಪ್ಪ ದುಡಿಯುತ್ತಿದ್ದರು. ಒಂದು ವರ್ಷವಿರುವಾಗಲೇ ತಂದೆಯನ್ನು ಕಳೆದುಕೊಂಡರು. ಮುಂದೆ ಅಜ್ಜನೇ ಇವರ ಜವಾಬ್ದಾರಿ ಯನ್ನು ತೆಗೆದುಕೊಂಡು ಕಾಶಿಯಲ್ಲಿ ಓದಿಸಿದರು.

ದೇಶದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರು. ಬ್ರಿಟಿಷ್ ಸರ್ಕಾರದ ವಿರುದ್ಧ ಗಾಂಧೀಜಿಯವರು ಮಾಡುತ್ತಿದ್ದ ಉಪ್ಪಿನ ಸತ್ಯಾಗ್ರಹದಲ್ಲೂ ಪಾಲ್ಗೊಂಡು ಜೈಲು ಸೇರಿದ್ದರು. ಮುಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ದೇಶದ ಆಡಳಿತ ಚುಕ್ಕಾಣಿ ಹಿಡಿದವರಲ್ಲಿ ಇವರು ಪ್ರಮುಖರು.

ದೇಶದ ನಾಯಕನಿಗೆ ಇರಲೇ ಬೇಕಾದ ಗುಣಗಳು ನಿಷ್ಠೆ ಮತ್ತು ದಕ್ಷತೆ. ಎಂತಹ ಕಠಿಣ ಸಮಯದಲ್ಲೂ ಕೂಡ ತಮ್ಮ ಗುರಿಯನ್ನು ಬಿಟ್ಟು ಕೊಡದ ನಿಶ್ಚಲತೆ ಲಾಲ್ ಬಹಾದ್ದೂರ್ ರವರದು. ಮಗಳ ಸಾವು, ಮಗನ ಅನಾರೋಗ್ಯ, ಬಡತನ ಯಾವುದೂ ಅವರನ್ನು ಅಡ್ಡ‌ ಹಾದಿ ಹಿಡಿಯುವಂತೆ ಮಾಡಲಿಲ್ಲ. ರಾಜಕೀಯ ಜೀವನದಲ್ಲಿ ಮುಂದೆ ಮಂತ್ರಿ ಯಾದಾಗ, ಆಮೇಲೆ ಭಾರತದ ಪ್ರಧಾನ ಮಂತ್ರಿಯಾದಾಗಲೂ ವೈಭವದ ಜೀವನಕ್ಕೆ ಮನಸೋಲಲಿಲ್ಲ. ದೇಶದ ಆರ್ಥಿಕ ವ್ಯವಸ್ಥೆ ಹೀನಾಯ ಸ್ಥಿತಿಗೆ ತಲುಪಿದಾಗ ವಾರದ ಒಂದು ಹೊತ್ತು ಉಪವಾಸ ಮಾಡುವ ನಿರ್ಧಾರ ಕೈಗೊಂಡರು, ಅಲ್ಲದೆ ದೇಶವಾಸಿಗಳಲ್ಲೂ ಮನವಿ ಮಾಡಿದರು. ಅದಕ್ಕೆ ದೇಶದ‌ಜನತೆ ಸ್ಪಂದಿಸಿದರು‌. ಪ್ರತಿ ಸೋಮವಾರದಂದು ಉಪವಾಸ‌ ಮಾಡಲು ಇಡೀ ದೇಶವೇ ಕೈ ಜೋಡಿಸಿತು. ಗೃಹವಿಲ್ಲದ ಗೃಹ ಮಂತ್ರಿ ಬಹುಶಃ ಇವರೊಬ್ಬರೇ.

ಭ್ರಷ್ಟಾಚಾರ ತಡೆಗೆ ಮೊದಲ ಬಾರಿಗೆ ಒಂದು ಸಮಿತಿಯನ್ನು ಇವರು ರಚಿಸಿದರು. ಮಹಿಳಾ ಕಂಡಕ್ಟರ್ ರನ್ನು ಇವರೇ ನೇಮಿಸಿದ್ದು. ಹೀಗೆ ಹಲವು ಮೊದಲುಗಳಿಗೆ ಕಾರಣರಾದ ಹೆಮ್ಮೆಯ ಭಾರತಾಂಭೆಯ ಪುತ್ರರಿವರು. ಲಾಲ್ ಬಹಾದ್ದೂರ್ ಜೀಯವರು ಒಳ್ಳೆಯ ಓದುಗರಾಗಿದ್ದರು. ಮೇಡಂ ಕ್ಯೂರಿಯವರ ಆತ್ಮ ಕಥೆಯನ್ನು ಹಿಂದಿಗೆ ಅನುವಾದಿಸಿದರು. ನಮ್ಮ ದುರದೃಷ್ಟ. ಒಬ್ಬ ಪ್ರಾಮಾಣಿಕ ದೇಶ ನಾಯಕನನ್ನು ಉಳಿಸಿಕೊಳ್ಳುವ ಸೌಭಾಗ್ಯ ನಮಗಿರಲಿಲ್ಲ.
ಜೈ ಜವಾನ್ ಜೈ ಕಿಸಾನ್ ಎಂಬ ಧ್ಯೇಯ ವಾಕ್ಯದಂತೆ ನಡೆದವರು.

ಮಾತು, ಮನಸ್ಸು ಕೆಲಸ ಮೂರನ್ನು ಶುದ್ಧ ವಾಗಿಟ್ಟುಕೊಂಡ ನಾಯಕನ ಅಂತ್ಯ ಸಂಶಯಾಸ್ಪದ ರೀತಿಯಲ್ಲಿ ಆದದ್ದು ಭಾರತೀಯರ ದೌಭಾಗ್ಯವೂ ಹೌದು ದುರಂತವೂ ಹೌದು. ಕೇವಲ‌ 17 ತಿಂಗಳ ಪ್ರಧಾನ ಮಂತ್ರಿ ಪಟ್ಟದಲ್ಲಿದ್ದರು ಯಾರಿಂದಲೂ ಮಾಡಲಾಗದ ಸಾಧನೆಗಳನ್ನು ಮಾಡಿ ಇತಿಹಾಸದ ಪುಟದಲ್ಲಿ ಅಚ್ಚಳಿಯದ ನೆನಪಾಗಿ ಕಾಡುವವರು. ಇಂದು ನಮ್ಮ ನೆಚ್ಚಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನುಮದಿನ. ಮನಃಪೂರ್ವಕವಾಗಿ ನಮಿಸೋಣ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

10 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago