Advertisement
ಅನುಕ್ರಮ

ಜೈ ಜವಾನ್ ಜೈ ಕಿಸಾನ್ ನಾಯಕನ ಜನುಮದಿನವಿಂದು

Share

ಜಗತ್ತು ಯಾವತ್ತೂ ಬೆಲೆ ಕೊಡುವುದು, ತಲೆ ಬಾಗುವುದು ಪ್ರಾಮಾಣಿಕರಿಗೆ. ಒಂದೊಮ್ಮೆ ಕಣ್ಣಿಗೆ ಮಣ್ಣೆರಚಿ ನಾಯಕನಾಗ ಬಹುದು ಆದರೆ ಅದು ಅಲ್ಪ ಕಾಲದ ಯಶಸ್ಸು ಅಷ್ಟೇ.

ದೇಶದ ಏಳಿಗೆಗಾಗಿ ಒಬ್ಬ ವ್ಯಕ್ತಿ ಎಷ್ಟೆಲ್ಲಾ ತ್ಯಾಗ ಮಾಡಬಹುದೋ ಅದೆಲ್ಲವನ್ನೂ ಮಾಡಿದವರು ಲಾಲ್ ಬಹಾದ್ದೂರ್ ಶಾಸ್ತ್ರಿಯವರು. ಮನಗೆದ್ದು ಊರುಗೆಲ್ಲುವ ಅಪ್ರತಿಮ ಸಾಹಸಿ. ಸಾಹಸ ,ಸಹನೆ, ಚಾತುರ್ಯ, ಬುದ್ಧಿವಂತಿಕೆ ಕೌಶಲ್ಯಗಳಲ್ಲಿ ಯಾರಿಗೂ ಇವರು ಕಮ್ಮಿಯಿರಲಿಲ್ಲ. ಈ ಎಲ್ಲಾ ಗುಣಗಳು ಒಂದೆರಡು ದಿನಗಳಲ್ಲಿ ಬೆಳೆಸಿಕೊಂಡಂತಹ ಗುಣಗಳಲ್ಲ. ಅವರು ಬೆಳೆದು ಬಂದ ಪರಿಸರ ಹಾಗೂ ಪರಿಸ್ಥಿತಿಯ ಪರಿಣಾಮವಾಗಿ ಮೈಗೂಡಿಸಿಕೊಂಡ ಗುಣಗಳು.
ಅವರು 2 ಅಕ್ಟೋಬರ್ 1904 ರಂದು ಕಾಶಿಯ ಬಳಿಯಿರುವ ಮೊಘಲ್ ಸರಾಯ್ ಎಂಬ ಊರಿನಲ್ಲಿ ಜನಿಸಿದರು. ತಂದೆ ಶಾರದಾ ಪ್ರಸಾದ್, ತಾಯಿ ರಾಂ ದುಲಾರಿ..

ಅಧ್ಯಾಪನ, ಗುಮಾಸ್ತರಾಗಿ ಅಪ್ಪ ದುಡಿಯುತ್ತಿದ್ದರು. ಒಂದು ವರ್ಷವಿರುವಾಗಲೇ ತಂದೆಯನ್ನು ಕಳೆದುಕೊಂಡರು. ಮುಂದೆ ಅಜ್ಜನೇ ಇವರ ಜವಾಬ್ದಾರಿ ಯನ್ನು ತೆಗೆದುಕೊಂಡು ಕಾಶಿಯಲ್ಲಿ ಓದಿಸಿದರು.

ದೇಶದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರು. ಬ್ರಿಟಿಷ್ ಸರ್ಕಾರದ ವಿರುದ್ಧ ಗಾಂಧೀಜಿಯವರು ಮಾಡುತ್ತಿದ್ದ ಉಪ್ಪಿನ ಸತ್ಯಾಗ್ರಹದಲ್ಲೂ ಪಾಲ್ಗೊಂಡು ಜೈಲು ಸೇರಿದ್ದರು. ಮುಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ದೇಶದ ಆಡಳಿತ ಚುಕ್ಕಾಣಿ ಹಿಡಿದವರಲ್ಲಿ ಇವರು ಪ್ರಮುಖರು.

ದೇಶದ ನಾಯಕನಿಗೆ ಇರಲೇ ಬೇಕಾದ ಗುಣಗಳು ನಿಷ್ಠೆ ಮತ್ತು ದಕ್ಷತೆ. ಎಂತಹ ಕಠಿಣ ಸಮಯದಲ್ಲೂ ಕೂಡ ತಮ್ಮ ಗುರಿಯನ್ನು ಬಿಟ್ಟು ಕೊಡದ ನಿಶ್ಚಲತೆ ಲಾಲ್ ಬಹಾದ್ದೂರ್ ರವರದು. ಮಗಳ ಸಾವು, ಮಗನ ಅನಾರೋಗ್ಯ, ಬಡತನ ಯಾವುದೂ ಅವರನ್ನು ಅಡ್ಡ‌ ಹಾದಿ ಹಿಡಿಯುವಂತೆ ಮಾಡಲಿಲ್ಲ. ರಾಜಕೀಯ ಜೀವನದಲ್ಲಿ ಮುಂದೆ ಮಂತ್ರಿ ಯಾದಾಗ, ಆಮೇಲೆ ಭಾರತದ ಪ್ರಧಾನ ಮಂತ್ರಿಯಾದಾಗಲೂ ವೈಭವದ ಜೀವನಕ್ಕೆ ಮನಸೋಲಲಿಲ್ಲ. ದೇಶದ ಆರ್ಥಿಕ ವ್ಯವಸ್ಥೆ ಹೀನಾಯ ಸ್ಥಿತಿಗೆ ತಲುಪಿದಾಗ ವಾರದ ಒಂದು ಹೊತ್ತು ಉಪವಾಸ ಮಾಡುವ ನಿರ್ಧಾರ ಕೈಗೊಂಡರು, ಅಲ್ಲದೆ ದೇಶವಾಸಿಗಳಲ್ಲೂ ಮನವಿ ಮಾಡಿದರು. ಅದಕ್ಕೆ ದೇಶದ‌ಜನತೆ ಸ್ಪಂದಿಸಿದರು‌. ಪ್ರತಿ ಸೋಮವಾರದಂದು ಉಪವಾಸ‌ ಮಾಡಲು ಇಡೀ ದೇಶವೇ ಕೈ ಜೋಡಿಸಿತು. ಗೃಹವಿಲ್ಲದ ಗೃಹ ಮಂತ್ರಿ ಬಹುಶಃ ಇವರೊಬ್ಬರೇ.

ಭ್ರಷ್ಟಾಚಾರ ತಡೆಗೆ ಮೊದಲ ಬಾರಿಗೆ ಒಂದು ಸಮಿತಿಯನ್ನು ಇವರು ರಚಿಸಿದರು. ಮಹಿಳಾ ಕಂಡಕ್ಟರ್ ರನ್ನು ಇವರೇ ನೇಮಿಸಿದ್ದು. ಹೀಗೆ ಹಲವು ಮೊದಲುಗಳಿಗೆ ಕಾರಣರಾದ ಹೆಮ್ಮೆಯ ಭಾರತಾಂಭೆಯ ಪುತ್ರರಿವರು. ಲಾಲ್ ಬಹಾದ್ದೂರ್ ಜೀಯವರು ಒಳ್ಳೆಯ ಓದುಗರಾಗಿದ್ದರು. ಮೇಡಂ ಕ್ಯೂರಿಯವರ ಆತ್ಮ ಕಥೆಯನ್ನು ಹಿಂದಿಗೆ ಅನುವಾದಿಸಿದರು. ನಮ್ಮ ದುರದೃಷ್ಟ. ಒಬ್ಬ ಪ್ರಾಮಾಣಿಕ ದೇಶ ನಾಯಕನನ್ನು ಉಳಿಸಿಕೊಳ್ಳುವ ಸೌಭಾಗ್ಯ ನಮಗಿರಲಿಲ್ಲ.
ಜೈ ಜವಾನ್ ಜೈ ಕಿಸಾನ್ ಎಂಬ ಧ್ಯೇಯ ವಾಕ್ಯದಂತೆ ನಡೆದವರು.

ಮಾತು, ಮನಸ್ಸು ಕೆಲಸ ಮೂರನ್ನು ಶುದ್ಧ ವಾಗಿಟ್ಟುಕೊಂಡ ನಾಯಕನ ಅಂತ್ಯ ಸಂಶಯಾಸ್ಪದ ರೀತಿಯಲ್ಲಿ ಆದದ್ದು ಭಾರತೀಯರ ದೌಭಾಗ್ಯವೂ ಹೌದು ದುರಂತವೂ ಹೌದು. ಕೇವಲ‌ 17 ತಿಂಗಳ ಪ್ರಧಾನ ಮಂತ್ರಿ ಪಟ್ಟದಲ್ಲಿದ್ದರು ಯಾರಿಂದಲೂ ಮಾಡಲಾಗದ ಸಾಧನೆಗಳನ್ನು ಮಾಡಿ ಇತಿಹಾಸದ ಪುಟದಲ್ಲಿ ಅಚ್ಚಳಿಯದ ನೆನಪಾಗಿ ಕಾಡುವವರು. ಇಂದು ನಮ್ಮ ನೆಚ್ಚಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನುಮದಿನ. ಮನಃಪೂರ್ವಕವಾಗಿ ನಮಿಸೋಣ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

12 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

23 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago