Advertisement

ರಾಜ್ಯದಲ್ಲಿ ಹಸುಗಳಿಗೆ ಕಾಣಿಸಿಕೊಂಡ ವೈರಸ್ ಜ್ವರ|

Share

ದೇಶದ‌ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ‌ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.

ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.


ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ  ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.


ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

16 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

16 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

17 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago