ದೇಶದ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.
ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…