ದೇಶದ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.
ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…