ದೇಶದ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.
ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…