ದೇಶದ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.
ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…