ದೇಶದ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.
ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…