Advertisement
MIRROR FOCUS

ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಜಾಗಗಳ ರಕ್ಷಣೆಗಾಗಿ ಕ್ರಮ | ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಲ್ಯಾಂಡ್ ಬೀಟ್ ಮತ್ತು ಆಧಾರ್ ಲಿಂಕ್ ಕಾರ್ಯ|

Share

ದೇಶದಲ್ಲಿ ಮೊದಲು ಸರ್ಕಾರಿ ಜಮೀನುಗಳ(Govt land) ಮೇಲೆ ಕಣ್ಣು ಹಾಕುವುದನ್ನು ತಪ್ಪಿಸಬೇಕು. ಇದಕ್ಕೆ ಮೊದಲು ಕ್ರಮ ತೆಗೆದುಕೊಳ್ಳಬೇಕಾದ್ದು ಸರ್ಕಾರ(Govt). ಇದೀಗ “ದೇಶದಲ್ಲೇ ಪ್ರಥಮ ಬಾರಿಗೆ ಸರ್ಕಾರಿ ಜಾಗಗಳ ಸಂರಕ್ಷಣೆಗಾಗಿ(Safty) ಲ್ಯಾಂಡ್ ಬೀಟ್(Land Beat) ವ್ಯವಸ್ಥೆ ಮತ್ತು ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಆರ್​ಟಿಸಿಯಲ್ಲಿ(RTC) ಜಮೀನು ಮಾಲೀಕರ ಭಾವಚಿತ್ರ ಜೊತೆಗೆ ಆಧಾರ್ ಜೋಡಣೆ(Adhar link) ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಲ್ಯಾಂಡ್ ಬೀಟ್ ಮತ್ತು ಆಧಾರ್ ಜೋಡಣೆ ಮಾರ್ಚ್ ತಿಂಗಳಿಂದ ಪ್ರಾರಂಭವಾಗಿದ್ದು, ಈಗಾಗಲೇ 14 ಲಕ್ಷ ಸರ್ಕಾರಿ ಜಾಗವನ್ನು ಆ್ಯಪ್​ನಲ್ಲಿ ಲೋಡ್ ಮಾಡಲಾಗಿದೆ. ಮತ್ತು 1.40 ಕೋಟಿ ಆರ್​ಟಿಸಿಗಳಿಗೆ ಆಧಾರ್ ಜೋಡಣೆಯಾಗಿದೆ” ಎಂದು ಕಂದಾಯ ಸಚಿವ(Revenue Minister) ಕೃಷ್ಣಬೈರೇಗೌಡ ತಿಳಿಸಿದರು.

ಸರ್ಕಾರಿ ಒತ್ತುವರಿ ಗುರುತಿಸುವ ಲ್ಯಾಂಡ್ ಬೀಟ್ ಹಾಗು ಆಧಾರ್ ಸೀಡಿಂಗ್ ಕಾರ್ಯಗಳ ಪರಿಶೀಲನೆ ನಡೆಸಲು ಸಚಿವರು ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕೋಡಿಪಾಳ್ಯ, ಚೆನ್ನಾದೇವಿ ಅಗ್ರಹಾರ ಗ್ರಾಮದ ಸರ್ಕಾರಿ ಜಾಗ, ಕೆರೆ ಒತ್ತುವರಿ ಜಾಗಗಳಿಗೆ ಭೇಟಿ ನೀಡಿದರು. ನಂತರ ಮಾಧ್ಯಮಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ಆಡಳಿತ ನಡೆಸಿದ ಹಲವು ಸರ್ಕಾರಗಳು ಸರ್ಕಾರಿ‌ ಜಾಗ ಸಂರಕ್ಷಣೆಗಾಗಿ ಪ್ರಯತ್ನಿಸಿವೆ. ಆದರೆ, ಪ್ರಗತಿ ಸಮಾಧಾನಕರವಾಗಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ‌ ನಂತರ ಸರ್ಕಾರಿ ಜಾಗ ಸಂರಕ್ಷಣೆಗೆ ಹಲವು ಉಪಕ್ರಮಗಳನ್ನು ತೆಗೆದುಕೊಂಡಿದೆ. ಇದರಲ್ಲಿ‌ ಲ್ಯಾಂಡ್ ಬೀಟ್ ವ್ಯವಸ್ಥೆಯೂ ಒಂದು. ಆರು ತಿಂಗಳ ಹಿಂದೆ ಲ್ಯಾಂಡ್ ಬೀಟ್ ಆ್ಯಪ್ ಸಿದ್ಧಪಡಿಸಿದ್ದು, ಸರ್ಕಾರಿ ಜಾಗದ ವಿವರ, ಒತ್ತುವರಿ ಮಾಹಿತಿ‌ ಬೆರಳ ತುದಿಯಲ್ಲೇ‌ ಸಿಗಲಿದೆ” ಎಂದು ಹೇಳಿದರು.

“ಈಗಾಗಲೇ ಆ್ಯಪ್​ನಲ್ಲಿ 14 ಲಕ್ಷ ಸರ್ಕಾರಿ ಜಾಗಗಳನ್ನು ಅಪ್​ಲೋಡ್ ಮಾಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ‌ ಮಹಜರು ನಡೆಸಿ, ಒತ್ತುವರಿಯಾಗಿದ್ದರೆ ಅವುಗಳ ವಿವರಗಳನ್ನು ಆ್ಯಪ್​ನಲ್ಲಿ ಹಂಚಿಕೊಳ್ಳಲಿದ್ದಾರೆ. ಇದರ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಲಿದ್ದಾರೆ. ಸದ್ಯ ರಾಜ್ಯಾದ್ಯಂತ 5.90 ಲಕ್ಷ ಸ್ಥಳಗಳನ್ನು ಮಹಜರು ಮಾಡಲಾಗಿದೆ. ಸರ್ಕಾರಿ ಜಾಗಗಳ‌ ಮಹಜರು ಪ್ರತಿ ಮೂರು ತಿಂಗಳಿಗೊಮ್ಮೆ ಪುನರಾವರ್ತಿತವಾಗಲಿದೆ. ಇದರಿಂದ ಒತ್ತುವರಿ, ಅತಿಕ್ರಮಣ ತಡೆಯಬಹುದಾಗಿದೆ” ಎಂದರು.

RTCಗೆ ಆಧಾರ್ ಲಿಂಕ್:ರಾಜ್ಯದಲ್ಲಿ 4.30 ಕೋಟಿ ಜಮೀನು ಮಾಲೀಕರಿದ್ದಾರೆ. ಇತ್ತೀಚೆಗೆ ಯಾರದ್ದೋ ಜಮೀನನ್ನು ಮತ್ಯಾರೋ ನೋಂದಣಿ ಮಾಡಿಸಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. RTC ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಮಾಲೀಕತ್ವಕ್ಕೆ ಖಾತ್ರಿ‌ ಕೊಟ್ಟಂತಾಗುತ್ತದೆ. ಜೊತೆಗೆ ಖಾತೆ, ಪಹಣಿ ವಿತರಣೆಯೂ ಸರಳೀಕರಣವಾಗಲಿದೆ” ಎಂದು ಹೇಳಿದರು.

“RTC ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಒಬ್ಬರ ಜಮೀನನ್ನು ಮತ್ತೊಬ್ಬರು ಲಪಟಾಯಿಸಲು ಆಗುವುದಿಲ್ಲ. ಆಧಾರ್ ಸಂಖ್ಯೆ ಜೋಡಣೆ ಅಭಿಯಾನವನ್ನು ಮಾರ್ಚ್ ತಿಂಗಳಿಂದಲೇ ಆರಂಭಿಸಲಾಗಿದೆ. ಸದ್ಯ 1.40 ಕೋಟಿ ಆಸ್ತಿಗಳು ಲಿಂಕ್ ಆಗಿವೆ. ಇನ್ನು ಮುರ್ನಾಲ್ಕು ತಿಂಗಳಲ್ಲಿ‌ ಎಲ್ಲ ಆಸ್ತಿಗಳ ಜೋಡಣೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು. “RTC- ಆಧಾರದ ಜೋಡಣೆಯಿಂದ ಪಾವತಿ ಖಾತೆ ಆಗದಿರುವ ಆಸ್ತಿಗಳ ಕುರಿತು ಸಹ ಮಾಹಿತಿ ಸಿಗಲಿದೆ. ಇದರಿಂದ ಆಡಳಿತ ಸರಳೀಕರಣಗೊಂಡು, ವೇಗವಾಗಿ ಕೆಲ‌ಸ ಮಾಡಲು ಸಾಧ್ಯವಾಗಲಿದೆ, ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ ಸುತ್ತಲೂ ಗ್ರೀನ್ ಫೆನ್ಸಿಂಗ್ ಹಾಕಬೇಕು. ಗಿಡಗಳನ್ನು ನೆಡಬೇಕು” ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

3 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

3 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

5 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

5 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

17 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago