ಭೂ ರಹಿತ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆ ಜಾರಿ : ಅರ್ಜಿ ಆಹ್ವಾನ

December 4, 2025
9:17 PM

ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.

ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:

  • ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಕಾರ್ಮಿಕರು.
  • ಯಾವುದೇ ಕೃಷಿ ಜಮೀನು ಹೊಂದಿರದವರು
  • ಕೃಷಿ ಕಾರ್ಮಿಕರಾಗಿ ಕನಿಷ್ಠ 3 ವರ್ಷಗಳ ಅನುಭವ ಇರುವವರು.
  • ಕುಟುಂಬದ ವಾರ್ಷಿಕ ಆದಾಯ ರೂ1.5 ಲಕ್ಷಕ್ಕಿಂತ ಕಡಿಮೆ ಇರುವವರು.
  • ಕರ್ನಾಟಕ ನಿವಾಸಿಯಾಗಿರಬೇಕು, 18-55 ವರ್ಷ ವಯ್ಸಿನ ಮಿತಿಯಲ್ಲಿರಬೇಕು, ಒಂದು ಕುಟುಂಬಕ್ಕೆ 2-3 ಎಕರೆವರೆಗೆ ಮಾತ್ರ.

ಬೇಕಾಗಿರುವ ದಾಖಲೆ:

  • ಆಧಾರ್ ಕಾರ್ಡ್
  • ಪ್ರಮಾಣ ಪತ್ರ
  • ಭೂ ಸುಧಾರಣಾ ದಾಖಲೆ

ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror