ನನ್ನ ಭೂಮಿ ಅಭಿಯಾನ ಜಾರಿಯಿಂದ ರೈತರಿಗೆ ಅನುಕೂಲ

January 25, 2025
7:00 AM
ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದೆ.

ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು,  ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ  ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್‌ನಿಂದ ಅನುಷ್ಟಾನಗೊಳಿಸಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror